Featured

ಶಿರೂರು ಶ್ರೀಗಳ ನಿಧನ ಸಂಶಯಾಸ್ಪದವಾಗಿದ್ದಲ್ಲಿ ತನಿಖೆಗೆ ಆದೇಶ : ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಶ್ರೀಗಳ ಅಕಾಲಿಕ ನಿಧನ ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ನಷ್ಟವನ್ನುಂಟುಮಾಡಿದೆ. ಅವರ ಸಾವಿನ ಬಗ್ಗೆ ಕೇಳಿಬರುತ್ತಿರುವ ಅನುಮಾನಗಳಿಗೆ ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.

ಶಿರೂರು ಲಕ್ಷ್ಮೀವರ ತೀರ್ಥರ ಜತೆ ಅಷ್ಠಮಠದ ಇತರೆ ಸ್ವಾಮಿಗಳ ಜತೆ ಉತ್ತಮ ಬಾಂಧವ್ಯ ಇರಲಿಲ್ಲ. ಅಷ್ಟ ಮಠಗಳ ಪೀಠಾಧೀಶರು ಶಿರೂರು ಶ್ರೀಗಳಿಗೆ ಪೀಠದಿಂದ ಇಳಿಯುವಂತೆ ಒತ್ತಡ ಹೇರಿದ್ದರು. ಆದರೆ ಪೀಠದಿಂದ ಇಳಿಯುವುದಿಲ್ಲ ಎಂದು ಕಾನೂನು ಹೋರಾಟ ಮಾಡುತ್ತೇನೆ ಎಂದು ಶಿರೂರು ಸ್ವಾಮಿ ಹೇಳಿದ್ದರು. ಜತೆಗೆ ತಮಗೆ ಜೀವ ಬೆದರಿಕೆ ಇದೆ, ತಮಗೆ ಗನ್​ ಮ್ಯಾನ್​ ಅವಶ್ಯಕತೆಯಿದೆ ಎಂದು ಅವರು ಆಪ್ತರಲ್ಲಿ ಹೇಳಿಕೊಂಡಿದ್ದರು. ಈಗ ಅವರ ಸಾವು ಹಲವು ಬಗೆಯ ಶಂಕೆಗಳಿಗೆ ಎಡೆ ಮಾಡಿಕೊಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಶಂಕೆ ಇದ್ದಲ್ಲಿ ತನಿಖೆಗೆ ಆದೇಶಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾವಿನ ಬಗ್ಗೆ ಶಂಕೆ ಇದ್ದಲ್ಲಿ ತನಿಖೆಗೆ ಆದೇಶಿಸಬೇಕಾಗುತ್ತದೆ. ಶೀರೂರು ಶ್ರೀ ಅಸಹಜ ಸಾವು ಶಂಕೆಯಿದ್ದಲ್ಲಿ ತನಿಖೆಗೆ ನೀಡಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ಅನಿವಾರ್ಯವಾಗಿ ತನಿಖೆಗೆ ಆದೇಶಿಸಬೇಕಾಗುತ್ತದೆ. ಇದುವರೆಗೂ ಶ್ರೀಗಳ ಸಾವು ಅಸಹಜ ಎಂಬ ದೂರು ಬಂದಿಲ್ಲ. ಹಾಗೇನಾದರೂ ದೂರು ಬಂದಲ್ಲಿ ಶೀಘ್ರ ಕ್ರಮ ತೆಗೆದುಕೊಳ್ಳುತ್ತೇವೆ,” ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇನ್ನು ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಕೂಡ ಪ್ರತಿಕ್ರಿಯೆ ನೀಡಿದ್ದು, ವಿಷ ಉಣಿಸಲಾಗಿದೆ ಎಂಬ ಸಂಶಯ ಭಕ್ತಾದಿಗಳಿಂದ ಮತ್ತು ಸ್ಥಳೀಯರಿಂದ ಕೇಳಿ ಬರುತ್ತಿದೆ. ಶಂಕೆ ನಿಜವಾದಲ್ಲಿ ಮುಂದಿನ ಕ್ರಮಕ್ಕೆ ಚಿಂತನೆ ನಡೆಸಲಾಗುವುದು ಎಂದು ಪ್ರತಿಕ್ರಿಯಿಸಿದ್ದರು.

ಉಡುಪಿಯ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ದೈವಾಧೀನರಾಗಿರುವುದು ಮನಸ್ಸಿಗೆ ಅತೀವ ನೋವು ತಂದಿದೆ. ಜನರ ಜೊತೆ ಸಾಮಾನ್ಯರಂತೆ ಬೆರೆಯುತ್ತಿದ್ದ ಹಾಗೂ ಶ್ರೀಕೃಷ್ಣನ ಸೇವೆಯಲ್ಲಿ ಅಪಾರ ಶ್ರದ್ಧೆ ಹೊಂದಿದ್ದ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಸಹ ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

30 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

41 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

59 minutes ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago