Featured

ಶಿರೂರು ಶ್ರೀ ಅಸಹಜ ಸಾವು ಪ್ರಕರಣ : ನಾಪತ್ತೆಯಾಗಿದ್ದ ಮಠದ ಸಿಸಿಟಿವಿ ಡಿವಿಆರ್ ಸ್ವರ್ಣಾ ನದಿಯಲ್ಲಿ ಪತ್ತೆ!

ಶ್ರೀಗಳು ಆಸ್ಪತ್ರೆ ಸೇರಿದ ಬಳಿಕ ಶ್ರೀಗಳು ಧರಿಸುತ್ತಿದ್ದ ಆಭರಣಗಳೂ ಸೇರಿ ಮಠದಲ್ಲಿದ್ದ 3 ಕೆಜಿ ಚಿನ್ನಾಭರಣ ಕೂಡ ನಾಪತ್ತೆ
ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಅವರ ಅಸಹಜ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಹಿಂದೆ ನಾಪತ್ತೆಯಾಗಿದ್ದ ಮಠದ ಸಿಸಿಟಿವಿ ಡಿವಿಆರ್ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಮಾಧ್ಯಮಗಳು ವರದಿ ಮಾಡಿರುವಂತೆ ಇಂದು ಮುಂಜಾನೆ ಸ್ವರ್ಣಾ ನದಿಯಲ್ಲಿ ಸಿಸಿಟಿವಿ ಡಿವಿಆರ್ ಪತ್ತೆಯಾಗಿದ್ದು, ತೆಪ್ಪದಲ್ಲಿ ತೆರಳಿದ್ದ ಮುಳುಗು ತಜ್ಞರು ದೊಡ್ಡ ಅಯಸ್ಕಾಂತದ ಮೂಲಕ ಡಿವಿಆರ್ ಅನ್ನು ನೀರಿನಿಂದ ಮೇಲೆತ್ತಿದ್ದಾರೆ ಎಂದು ಹೇಳಲಾಗಿದೆ. ನಾಪತ್ತೆಯಾಗಿದ್ದ ಡಿವಿಆರ್ ಗಾಗಿ ಸೋಮವಾರ ಸಂಜೆಯಿಂದಲೇ ಹುಡುಕಾಟ ಆರಂಭಿಸಲಾಗಿತ್ತು. ಮಠಕ್ಕೆ ಸಮೀಪದಲ್ಲೇ ಇರುವ ಸ್ವರ್ಣಾ ನದಿಯಲ್ಲಿ ಡಿವಿಆರ್ ಅನ್ನು ಎಸೆದಿರುವ ಸಾದ್ಯತೆ ಮೇರೆಗೆ ನದಿಯಲ್ಲಿ ಮುಳುಗು ತಕ್ಷರ ನೆರವಿನಿಂದ ಹುಡುಕಾಟ ಆರಂಭಿಸಲಾಗಿತ್ತು. ಇದೀಗ ಡಿವಿಆರ್ ಪತ್ತೆ ಮಾಡುವಲ್ಲಿ ಕೊನೆಗೂ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಸಾವಿನ ಸಂಚು ಹೂಡಿದ್ದ ಸ್ವಾಮೀಜಿಯ ನಿಕಟವರ್ತಿಗಳೇ ಡಿವಿಆರ್‌ ಅನ್ನು ನದಿಗೆ ಎಸೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಡಿವಿಆರ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿ ಅದರಲ್ಲಿರುವ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಶಿರೂರು ಸ್ವಾಮೀಜಿ ಚಿನ್ನಾಭರಣ ನಾಪತ್ತೆ
ಇನ್ನು ಶಿರೂರು ಶ್ರೀಗಳ ಅಸಹಜ ಸಾವಿಗೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಅನಾರೋಗ್ಯದ ಕಾರಣ ಶ್ರೀಗಳು ಆಸ್ಪತ್ರೆ ಸೇರಿದ ಬೆನ್ನಲ್ಲೇ ಮಠದಲ್ಲಿದ್ದ ಸುಮಾರು 3 ಕೆಜಿಯಷ್ಟು ಚಿನ್ನಾಭರಣಗಳು ನಾಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಈ ಮೂರು ಕೆಜಿ ಚಿನ್ನಾಭರಣಗಳಲ್ಲಿ ಶ್ರೀಗಳು ನಿತ್ಯ ಧರಿಸುತ್ತಿದ್ದ ಸುಮಾರು 1 ಕೆಜಿಯಷ್ಟು ಚಿನ್ನಾಭರಣಗಳೂ ಸೇರಿವೆ ಎನ್ನಲಾಗಿದೆ. ಇದೇ ಆಭರಣಗಳನ್ನು ಪ್ರಸ್ತುತ ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿರುವ ಶಂಕಿತ ಮಹಿಳೆ ರಮ್ಯಾ ಶೆಟ್ಟಿ ಅವರೂ ಧರಿಸುತ್ತಿದ್ದರು ಎನ್ನಲಾಗಿದೆ.
Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago