Featured

ಶಿರೂರು : ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ :  5 ಮೃತದೇಹ ಪತ್ತೆ; ಉಳಿದವರಿಗಾಗಿ ಹುಡುಕಾಟ – vishwanews24

ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ :  5 ಮೃತದೇಹ ಪತ್ತೆ; ಉಳಿದವರಿಗಾಗಿ ಹುಡುಕಾಟ

ಕಾರವಾರ: ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ ಭಾರಿ ಗುಡ್ಡ ಕುಸಿದು ಹತ್ತು ಮಂದಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಐದು ಮಂದಿಯ ಮೃತದೇಹಗಳು ಪತ್ತೆಯಾಗಿವೆ.

ಇಂದು ಮುಂಜಾನೆಯಿಂದ ಮತ್ತೆ ಮೃತದೇಹಗಳ ಪತ್ತೆ ಕಾರ್ಯಾಚರಣೆಯನ್ನು ಎರಡು ಹಿಟಾಚಿ, ಎರಡು ಜೆಸಿಬಿ ಯಂತ್ರಗಳ ಮೂಲಕ ಆರಂಭಿಸಲಾಗಿದೆ. ಮಣ್ಣಿನ ಅಡಿ 10 ಮಂದಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು. ಈಗಾಗಲೇ 5 ಮಂದಿಯ ಮೃತದೇಹವನ್ನು ಪತ್ತೆ ಮಾಡಲಾಗಿದ್ದು, ಇನ್ನುಳಿದವರ ಮೈತದೇಹಗಳಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ನಿನ್ನೆ ಮಹಿಳೆಯೊಬ್ಬರ ಮೃತದೇಹ ಪತ್ತೆಯಾತಗಿತ್ತು. ನಿನ್ನೆ ಕತ್ತಲಾದ್ದರಿಂದ ಹಾಗೂ ಮಳೆಯ ಕಾರಣ ಕಾರ್ಯಾಚರಣೆ ನಿಲ್ಲಿಸಲಾಗಿತ್ತು.

ಭಾರಿ ಪ್ರಮಾಣದಲ್ಲಿ ಗುಡ್ಡದ ಮಣ್ಣು ಹೆದ್ದಾರಿಗೆ ಕುಸಿದಿರುವುದರಿಂದ ಈ ದುರ್ಘಟನೆ ನಡೆದಿದೆ. ಮಣ್ಣು ತೆರವು ಕಾರ್ಯಾಚರಣೆಗೆ ಹತ್ತಾರು ಲಾರಿಗಳನ್ನು ಬಳಸಲಾಗುತ್ತಿದೆ. ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್, ಎನ್‌ಡಿಆರ್‌ಎಫ್ ತಂಡ ಪಾಲ್ಗೊಂಡಿದೆ.

ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣು ಕೊಚ್ಚಿ ಹೋಗುತ್ತಿದೆ. ಇದರಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯು ಈ ಅವಘಡಕ್ಕೆ ಕಾರಣವಾಗಿದ್ದು, ಇನ್ನಷ್ಟು ಜನರನ್ನು ಬಲಿ ಪಡೆಯುವ ಭೀತಿ ಎದುರಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago