ಶಿರ್ವ: ಕಾಂಗ್ರೆಸ್ನ 5 ವರ್ಷಗಳ ಹಿಂದಿನ ಅಭಿವೃದ್ಧಿ ಕಾಮಗಾರಿಗಳನ್ನು ಪಟ್ಟಿ ಮಾಡಿ ಮತದಾರರ ಮುಂದಿಟ್ಟು ಬಿಜೆಪಿ ಓಟು ಕೇಳುತ್ತಿದೆ. ಸ್ವಂತಿಕೆಯಿರದ ಬಿಜೆಪಿಗೆ ಕಾಂಗ್ರೆಸ್ ಪ್ರಣಾಳಿಕೆಯೇ ದಾರಿದೀಪ ಎಂದು ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಗುರುವಾರ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದರು.
2013 ರಿಂದ 2018ರಲ್ಲಿ ತಾನು ಶಾಸಕನಾಗಿದ್ದ ಅವಧಿಯಲ್ಲಿ ನಡೆಸಿದ್ದ ಶೇ.75 ಅಭಿವೃದ್ಧಿ ಕಾಮಗಾರಿಗಳನ್ನು ತಮ್ಮ ಕಾಲದ ಅಭಿವೃದ್ಧಿ ಎಂದು ಮತದಾರರ ಮುಂದೆ ಸುಳ್ಳು ಹೇಳಿ ಬಿಜೆಪಿ ಓಟು ಕೇಳುವ ಗಿಮಿಕ್ ಮಾಡ್ತಾ ಇದ್ದು ಯಾವುದೇ ಸಾರ್ಥಕತೆ ಇಲ್ಲ. ಕಳೆದ ಬಾರಿಯ ಕಾಂಗ್ರೆಸ್ ಪ್ರಣಾಳಿಕೆಯನ್ನು ಈ ಬಾರಿ ಬಿಜೆಪಿ ಕಾಪಿ ಮಾಡಿ ಬಿಡುಗಡೆ ಮಾಡಿದ್ದು, ತನ್ನ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳು ಮತ್ತು ಕಾಂಗ್ರೆಸ್ ಪ್ರಣಾಳಿಕೆಯೇ ಬಿಜೆಪಿಗೆ ದಾರಿದೀಪವಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಪ್ರಶಾಂತ್ ಜತ್ತನ್ನ,ರತನ್ ಶೆಟ್ಟಿ,ಮೆಲ್ವಿನ್ ಡಿಸೋಜಾ,ಹಸನಬ್ಬ ಶೇಖ್,ಜೆಸಿಂತಾ,ಲ್ಯಾನ್ಸಿ ಕೋರ್ಡಾ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…