ಶಿರ್ವ : ಹಲವು ವರ್ಷಗಳಿಂದ ಅನಾರೋಗ್ಯ ಪೀಡಿತನಾಗಿ ಹಾಸಿಗೆ ಹಿಡಿದಿರುವ ಬಡ ಕುಟುಂಬದ ಶಿರ್ವ ಗ್ರಾಮದ ಮಟ್ಟಾರು ಕಡಂಬು ನಿವಾಸಿ ಅರುಣ್ ಕುಮಾರ್ ಅವರ ಪುತ್ರ 16ರ ಹರೆಯದ ಬಾಲಕ ದೀಶಿತ್ ಕುಮಾರ್ ಅವರಿಗೆ ಸಹೃದಯರ ಸಹಾಯಹಸ್ತ ಬೇಕಿದೆ. ದೀಶಿತ್ ಕುಮಾರ್ ಅಪಸ್ತಾರ (Epilepsy) ಕಾಯಿಲೆಯಿ೦ದ ಬಳಲುತ್ತಿದ್ದು, ಊರವರು ಮತ್ತು ಹಿತೈಷಿಗಳ ಸಹಾಯದಿಂದ ಬಾಲಕನಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ.
ಹೆತ್ತವರಿಗೆ ಯಾವುದೇ ಸಂಪಾದನೆಯ ಮೂಲವಿಲ್ಲದೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದ ಕಾರಣ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲಾಗದೆ ಮನೆಯಲ್ಲಿಯೇ ಹಾಸಿಗೆ ಹಿಡಿದಿದ್ದಾನೆ. ಬೆಂಗಳೂರಿನ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯ ಡಾ| ರಾಘವೇಂದ್ರ ಎಸ್.ಸುಮಾರು 11 ಲ.ರೂಗಳ ಅಗತ್ಯವಿದೆ ಎಂದು ತಿಳಿಸಿದ್ದು ಹೆತ್ತವರು ಚಿಕಿತ್ಸೆಯ ವೆಚ್ಚ ಭರಿಸುವ ಸ್ಥಿತಿಯಲ್ಲಿಲ್ಲ. ಬಾಲಕನ ತಂದೆ ಅರುಣ್ ಕುಮಾರ್ ಕೂಡಾ ಅಂಗವಿಕಲನಾಗಿದ್ದು, ಈಗಾಗಲೇ ಮಗನ ಚಿಕಿತ್ಸೆಗಾಗಿ ಸಾಲ ಮಾಡಿ ಹಲವಾರು ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಬಡ ಕುಟುಂಬದ ಜೀವನ ನಿರ್ವಹಣೆಯೂ ಸೇರಿದಂತೆ ಬಾಲಕನ ಚಿಕಿತ್ಸೆಗಾಗಿ ದಾನಿಗಳ ನೆರವಿನ ಅಗತ್ಯವಿದೆ.
ಕುಟುಂಬಕ್ಕೆ ಬಡ ಅಸಹಾಯಕ ಸಹಾಯ ಮಾಡಲಿಚ್ಚಿಸುವವರು ದೀಶಿತ್ ಕುಮಾರ್ ಕುಮಾರ್ ಅವರ ತಂದೆ ಅರುಣ್ ಕುಮಾರ್ ಅವರ ಶಿರ್ವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಎಸ್.ಬಿ.ಖಾತೆ 81800100001057 (ISFC code BARBOVISHUD) ನಂಬ್ರಕ್ಕೆ ಜಮಾ ಮಾಡಬಹುದಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…