Featured

ಶಿರ್ವ: ಅನಾರೋಗ್ಯ ಪೀಡಿತ ಬಾಲಕನಿಗೆ ಬೇಕಿದೆ ನೆರವಿನ ಹಸ್ತ – vishwanews24

ಶಿರ್ವ: ಅನಾರೋಗ್ಯ ಪೀಡಿತ ಬಾಲಕನಿಗೆ ಬೇಕಿದೆ ನೆರವಿನ ಹಸ್ತ

ಶಿರ್ವ : ಹಲವು ವರ್ಷಗಳಿಂದ ಅನಾರೋಗ್ಯ ಪೀಡಿತನಾಗಿ ಹಾಸಿಗೆ ಹಿಡಿದಿರುವ ಬಡ ಕುಟುಂಬದ ಶಿರ್ವ ಗ್ರಾಮದ ಮಟ್ಟಾರು ಕಡಂಬು ನಿವಾಸಿ ಅರುಣ್ ಕುಮಾರ್ ಅವರ ಪುತ್ರ 16ರ ಹರೆಯದ ಬಾಲಕ ದೀಶಿತ್ ಕುಮಾರ್ ಅವರಿಗೆ ಸಹೃದಯರ ಸಹಾಯಹಸ್ತ ಬೇಕಿದೆ. ದೀಶಿತ್ ಕುಮಾರ್ ಅಪಸ್ತಾರ (Epilepsy) ಕಾಯಿಲೆಯಿ೦ದ ಬಳಲುತ್ತಿದ್ದು, ಊರವರು ಮತ್ತು ಹಿತೈಷಿಗಳ ಸಹಾಯದಿಂದ ಬಾಲಕನಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ.

ಹೆತ್ತವರಿಗೆ ಯಾವುದೇ ಸಂಪಾದನೆಯ ಮೂಲವಿಲ್ಲದೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದ ಕಾರಣ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲಾಗದೆ ಮನೆಯಲ್ಲಿಯೇ ಹಾಸಿಗೆ ಹಿಡಿದಿದ್ದಾನೆ. ಬೆಂಗಳೂರಿನ ಹೆಲ್ತ್‌ ಕೇರ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯ ಡಾ| ರಾಘವೇಂದ್ರ ಎಸ್.ಸುಮಾರು 11 ಲ.ರೂಗಳ ಅಗತ್ಯವಿದೆ ಎಂದು ತಿಳಿಸಿದ್ದು ಹೆತ್ತವರು ಚಿಕಿತ್ಸೆಯ ವೆಚ್ಚ ಭರಿಸುವ ಸ್ಥಿತಿಯಲ್ಲಿಲ್ಲ. ಬಾಲಕನ ತಂದೆ ಅರುಣ್ ಕುಮಾರ್ ಕೂಡಾ ಅಂಗವಿಕಲನಾಗಿದ್ದು, ಈಗಾಗಲೇ ಮಗನ ಚಿಕಿತ್ಸೆಗಾಗಿ ಸಾಲ ಮಾಡಿ ಹಲವಾರು ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಬಡ ಕುಟುಂಬದ ಜೀವನ ನಿರ್ವಹಣೆಯೂ ಸೇರಿದಂತೆ ಬಾಲಕನ ಚಿಕಿತ್ಸೆಗಾಗಿ ದಾನಿಗಳ ನೆರವಿನ ಅಗತ್ಯವಿದೆ.

ಕುಟುಂಬಕ್ಕೆ ಬಡ ಅಸಹಾಯಕ ಸಹಾಯ ಮಾಡಲಿಚ್ಚಿಸುವವರು ದೀಶಿತ್ ಕುಮಾರ್ ಕುಮಾರ್ ಅವರ ತಂದೆ ಅರುಣ್ ಕುಮಾರ್ ಅವರ ಶಿರ್ವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಎಸ್.ಬಿ.ಖಾತೆ 81800100001057 (ISFC code BARBOVISHUD) ನಂಬ್ರಕ್ಕೆ ಜಮಾ ಮಾಡಬಹುದಾಗಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

16 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

16 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

16 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

16 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

17 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

19 hours ago