ಶಿರ್ವ : ಹಲವು ವರ್ಷಗಳಿಂದ ಅನಾರೋಗ್ಯ ಪೀಡಿತನಾಗಿ ಹಾಸಿಗೆ ಹಿಡಿದಿರುವ ಬಡ ಕುಟುಂಬದ ಶಿರ್ವ ಗ್ರಾಮದ ಮಟ್ಟಾರು ಕಡಂಬು ನಿವಾಸಿ ಅರುಣ್ ಕುಮಾರ್ ಅವರ ಪುತ್ರ 16ರ ಹರೆಯದ ಬಾಲಕ ದೀಶಿತ್ ಕುಮಾರ್ ಅವರಿಗೆ ಸಹೃದಯರ ಸಹಾಯಹಸ್ತ ಬೇಕಿದೆ. ದೀಶಿತ್ ಕುಮಾರ್ ಅಪಸ್ತಾರ (Epilepsy) ಕಾಯಿಲೆಯಿ೦ದ ಬಳಲುತ್ತಿದ್ದು, ಊರವರು ಮತ್ತು ಹಿತೈಷಿಗಳ ಸಹಾಯದಿಂದ ಬಾಲಕನಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ.
ಹೆತ್ತವರಿಗೆ ಯಾವುದೇ ಸಂಪಾದನೆಯ ಮೂಲವಿಲ್ಲದೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದ ಕಾರಣ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲಾಗದೆ ಮನೆಯಲ್ಲಿಯೇ ಹಾಸಿಗೆ ಹಿಡಿದಿದ್ದಾನೆ. ಬೆಂಗಳೂರಿನ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯ ಡಾ| ರಾಘವೇಂದ್ರ ಎಸ್.ಸುಮಾರು 11 ಲ.ರೂಗಳ ಅಗತ್ಯವಿದೆ ಎಂದು ತಿಳಿಸಿದ್ದು ಹೆತ್ತವರು ಚಿಕಿತ್ಸೆಯ ವೆಚ್ಚ ಭರಿಸುವ ಸ್ಥಿತಿಯಲ್ಲಿಲ್ಲ. ಬಾಲಕನ ತಂದೆ ಅರುಣ್ ಕುಮಾರ್ ಕೂಡಾ ಅಂಗವಿಕಲನಾಗಿದ್ದು, ಈಗಾಗಲೇ ಮಗನ ಚಿಕಿತ್ಸೆಗಾಗಿ ಸಾಲ ಮಾಡಿ ಹಲವಾರು ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಬಡ ಕುಟುಂಬದ ಜೀವನ ನಿರ್ವಹಣೆಯೂ ಸೇರಿದಂತೆ ಬಾಲಕನ ಚಿಕಿತ್ಸೆಗಾಗಿ ದಾನಿಗಳ ನೆರವಿನ ಅಗತ್ಯವಿದೆ.
ಕುಟುಂಬಕ್ಕೆ ಬಡ ಅಸಹಾಯಕ ಸಹಾಯ ಮಾಡಲಿಚ್ಚಿಸುವವರು ದೀಶಿತ್ ಕುಮಾರ್ ಕುಮಾರ್ ಅವರ ತಂದೆ ಅರುಣ್ ಕುಮಾರ್ ಅವರ ಶಿರ್ವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಎಸ್.ಬಿ.ಖಾತೆ 81800100001057 (ISFC code BARBOVISHUD) ನಂಬ್ರಕ್ಕೆ ಜಮಾ ಮಾಡಬಹುದಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…