ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 11ರ ಸೋಮವಾರ ಸಂಜೆ ಶಿರ್ವದಲ್ಲಿ ನಡೆದಿದೆ. ಮೃತರನ್ನು ಶಿರ್ವ ನೆಕ್ಕರೆ ನಿವಾಸಿ ಸೈಮನ್ ಡಿಸೋಜ (57)ಎಂದು ಗುರುತಿಸಲಾಗಿದೆ.
ಸೈಮನ್ ಡಿಸೋಜ ಸೋಮವಾರ ಸಂಜೆ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌದಿಯಲ್ಲಿ ಸುಮಾರು 25 ವರ್ಷಗಳ ಕಾಲ ಸಾಫ್ಟ್ ವೇರ್ ಉದ್ಯಮಿಯಾಗಿದ್ದ ಅವರು ವಿದೇಶದಿಂದ ಬಂದ ಬಳಿಕ ಸಮಾಜ ಸೇವೆ ಯಲ್ಲಿ ತೊಡಗಿಸಿಕೊಂಡಿದ್ದರು.
ಪಾಂಬೂರು ಮಾನಸ ಪುನರ್ವಸತಿ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿದ್ದು, ಕೇಂದ್ರದ ಉನ್ನತಿಗಾಗಿ ಶ್ರಮಿಸಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ ಅಗ್ನಿಶಾಮಕ ದಳ ಶವವನ್ನು ಬಾವಿಯಿಂದ ಹೊರಗೆ ತೆಗೆದಿದೆ. ಈ ಕುರಿತು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮೃತರು ತಾಯಿ, ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸುಳ್ಯ : ಗಾನ ಗಂಧರ್ವ ಖ್ಯಾತಿಯ ಯಕ್ಷಗಾನ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ನಿಧನ – VIshwanews24
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…