ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 11ರ ಸೋಮವಾರ ಸಂಜೆ ಶಿರ್ವದಲ್ಲಿ ನಡೆದಿದೆ. ಮೃತರನ್ನು ಶಿರ್ವ ನೆಕ್ಕರೆ ನಿವಾಸಿ ಸೈಮನ್ ಡಿಸೋಜ (57)ಎಂದು ಗುರುತಿಸಲಾಗಿದೆ.
ಸೈಮನ್ ಡಿಸೋಜ ಸೋಮವಾರ ಸಂಜೆ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌದಿಯಲ್ಲಿ ಸುಮಾರು 25 ವರ್ಷಗಳ ಕಾಲ ಸಾಫ್ಟ್ ವೇರ್ ಉದ್ಯಮಿಯಾಗಿದ್ದ ಅವರು ವಿದೇಶದಿಂದ ಬಂದ ಬಳಿಕ ಸಮಾಜ ಸೇವೆ ಯಲ್ಲಿ ತೊಡಗಿಸಿಕೊಂಡಿದ್ದರು.
ಪಾಂಬೂರು ಮಾನಸ ಪುನರ್ವಸತಿ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿದ್ದು, ಕೇಂದ್ರದ ಉನ್ನತಿಗಾಗಿ ಶ್ರಮಿಸಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ ಅಗ್ನಿಶಾಮಕ ದಳ ಶವವನ್ನು ಬಾವಿಯಿಂದ ಹೊರಗೆ ತೆಗೆದಿದೆ. ಈ ಕುರಿತು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮೃತರು ತಾಯಿ, ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸುಳ್ಯ : ಗಾನ ಗಂಧರ್ವ ಖ್ಯಾತಿಯ ಯಕ್ಷಗಾನ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ನಿಧನ – VIshwanews24
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…