ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 11ರ ಸೋಮವಾರ ಸಂಜೆ ಶಿರ್ವದಲ್ಲಿ ನಡೆದಿದೆ. ಮೃತರನ್ನು ಶಿರ್ವ ನೆಕ್ಕರೆ ನಿವಾಸಿ ಸೈಮನ್ ಡಿಸೋಜ (57)ಎಂದು ಗುರುತಿಸಲಾಗಿದೆ.
ಸೈಮನ್ ಡಿಸೋಜ ಸೋಮವಾರ ಸಂಜೆ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌದಿಯಲ್ಲಿ ಸುಮಾರು 25 ವರ್ಷಗಳ ಕಾಲ ಸಾಫ್ಟ್ ವೇರ್ ಉದ್ಯಮಿಯಾಗಿದ್ದ ಅವರು ವಿದೇಶದಿಂದ ಬಂದ ಬಳಿಕ ಸಮಾಜ ಸೇವೆ ಯಲ್ಲಿ ತೊಡಗಿಸಿಕೊಂಡಿದ್ದರು.
ಪಾಂಬೂರು ಮಾನಸ ಪುನರ್ವಸತಿ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿದ್ದು, ಕೇಂದ್ರದ ಉನ್ನತಿಗಾಗಿ ಶ್ರಮಿಸಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ ಅಗ್ನಿಶಾಮಕ ದಳ ಶವವನ್ನು ಬಾವಿಯಿಂದ ಹೊರಗೆ ತೆಗೆದಿದೆ. ಈ ಕುರಿತು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮೃತರು ತಾಯಿ, ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸುಳ್ಯ : ಗಾನ ಗಂಧರ್ವ ಖ್ಯಾತಿಯ ಯಕ್ಷಗಾನ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ನಿಧನ – VIshwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…