ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪರಿಚಯವಾದ ವ್ಯಕ್ತಿ ನಿರಂತರ ಅವಮಾನ, ಕಿರುಕುಳ, ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರ ಮೇಲೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಪು ಗ್ರಾಮದ ನಿವಾಸಿ ಸಮೀನಾ, ಸಹೋದರಿ ಆಸ್ಮಾ ಹಾಗೂ ಇನ್ನಾಗ್ರಾಂ ಖಾತೆಯಲ್ಲಿ ಪರಿಚಯವಾದ ವ್ಯಕ್ತಿ ಆಪಾದಿತರು. ಜಹೀರ್ ಅಬ್ದುಲ್ ಮಾಂಗಾವಕರ್ (42) ಆತ್ಮಹತ್ಯೆ ಮಾಡಿಕೊಂಡವರು.
ಇದನ್ನೂ ಓದಿ:
ಘಟನೆಯ ವಿವರ :
ಬೆಳಪು ಗ್ರಾಮದ ನಿವಾಸಿ ಸಮೀನಾ ಅವರಿಗೆ ಗೋವಾ ಮೂಲದ ಜಹೀರ್ ಅಬ್ದುಲ್ ಮಾಂಗಾವಕರ್ ಅವರೊಂದಿಗೆ 2012ರ ಫೆ.19 ರಂದು ಮೂಳೂರು ಜುಮ್ಮಾ ಮಸೀದಿಯಲ್ಲಿ ವಿವಾಹವಾಗಿದ್ದು, ದಾನಿಶ್ ಮತ್ತು ಜೈಡ್ ಎಂಬ ಇಬ್ಬರು ಮಕ್ಕಳಿದ್ದಾರೆ. ಸುಮಾರು ಐದು ವರ್ಷಗಳ ಬಳಿಕ ಸಮೀನಾ ತನ್ನ ಗಂಡನೊಂದಿಗೆ ವಾಸಿಸಲು ಇಷ್ಟವಿಲ್ಲವೆಂದು ಮಕ್ಕಳೊಂದಿಗೆ ಬಂದು ಬೆಳಪುವಿನ ತವರು ಮನೆಯಲ್ಲಿ ವಾಸ ಮಾಡಿಕೊಂಡು ಬೆಳಪು ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
ಆ ಸಮಯದಲ್ಲಿ ಇನ್ಸ್ಟಾಗ್ರಾಮ್ ಖಾತೆಯ ವ್ಯಕ್ತಿಯೊಂದಿಗೆ ಸಮೀನಾಳಿಗೆ ಸಂಪರ್ಕ ಇರುವ ಬಗ್ಗೆ ಜಹೀರ್ ಗೆ ತಿಳಿದು ಬಂದಿರುತ್ತದೆ. ಇದನ್ನು ವಿರೋಧಿಸಿದ ಜಹೀರ್ ನನ್ನು ಸಮೀನಾಳು ಮನೆಯಿಂದ ಹೊರಗೆ ಹಾಕಿ ಮಕ್ಕಳನ್ನು ಸಂಪರ್ಕಿಸಲು ನಿರಾಕರಿಸಿದ್ದು, ಸಮೀನಾ ಮತ್ತು ಅವಳ ಸಹೋದರಿ ಆತ್ಮಾ ಹಾಗೂ ಇನ್ಸ್ಟಾಗ್ರಾಮ್ ಖಾತೆಯ ವ್ಯಕ್ತಿ ಸೇರಿಕೊಂಡು ಜಹೀರ್ ನಿಗೆ ನಿರಂತರ ಮಾನಸಿಕ ಹಿಂಸೆ ಕಿರುಕುಳ ನೀಡಿ ಅವಮಾನ ಮಾಡಿದ್ದರು.
ಇದನ್ನೂ ಓದಿ:
ಇದರಿಂದ ಮಾನಸಿಕವಾಗಿ ಮನನೊಂದ ಜಹೀರ್ ಅಬ್ದುಲ್ ಮಾಂಗಾವಕರ್ ಮೇ. 16 ರಂದು ಬೆಳಪುವಿನ ಜವನರಕಟ್ಟೆಯ ಪತ್ನಿ ಸಮೀನಾಳ ಮನೆಯ ಎದುರು ಇರುವ ಮಾವಿನ ಮರದ ಕೊಂಬೆಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಜಹೀರನು ಆತ್ಮಹತ್ಯೆ ಮಾಡಿಕೊಳ್ಳಲು ಸಮೀನಾ, ಆಕೆಯ ಸಹೋದರಿ ಆಸ್ಮಾ ಹಾಗೂ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪರಿಚಯವಾದ ವ್ಯಕ್ತಿ ಪ್ರಚೋದನೆ ಹಾಗೂ ಪ್ರೇರಣೆ ನೀಡಿರುವುದಾಗಿ ಅಫ್ಘಾನಾ ರಮಝಾನ್ ಕಾರ್ನೇಕರ್ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…