Featured

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು

ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪರಿಚಯವಾದ ವ್ಯಕ್ತಿ ನಿರಂತರ ಅವಮಾನ, ಕಿರುಕುಳ, ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರ ಮೇಲೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಪು ಗ್ರಾಮದ ನಿವಾಸಿ ಸಮೀನಾ, ಸಹೋದರಿ ಆಸ್ಮಾ ಹಾಗೂ ಇನ್ನಾಗ್ರಾಂ ಖಾತೆಯಲ್ಲಿ ಪರಿಚಯವಾದ ವ್ಯಕ್ತಿ ಆಪಾದಿತರು. ಜಹೀರ್ ಅಬ್ದುಲ್ ಮಾಂಗಾವಕರ್ (42) ಆತ್ಮಹತ್ಯೆ ಮಾಡಿಕೊಂಡವರು.

ಇದನ್ನೂ ಓದಿ:

ಘಟನೆಯ ವಿವರ :
ಬೆಳಪು ಗ್ರಾಮದ ನಿವಾಸಿ ಸಮೀನಾ ಅವರಿಗೆ ಗೋವಾ ಮೂಲದ ಜಹೀರ್ ಅಬ್ದುಲ್ ಮಾಂಗಾವಕರ್ ಅವರೊಂದಿಗೆ 2012ರ ಫೆ.19 ರಂದು ಮೂಳೂರು ಜುಮ್ಮಾ ಮಸೀದಿಯಲ್ಲಿ ವಿವಾಹವಾಗಿದ್ದು, ದಾನಿಶ್ ಮತ್ತು ಜೈಡ್ ಎಂಬ ಇಬ್ಬರು ಮಕ್ಕಳಿದ್ದಾರೆ. ಸುಮಾರು ಐದು ವರ್ಷಗಳ ಬಳಿಕ ಸಮೀನಾ ತನ್ನ ಗಂಡನೊಂದಿಗೆ ವಾಸಿಸಲು ಇಷ್ಟವಿಲ್ಲವೆಂದು ಮಕ್ಕಳೊಂದಿಗೆ ಬಂದು ಬೆಳಪುವಿನ ತವರು ಮನೆಯಲ್ಲಿ ವಾಸ ಮಾಡಿಕೊಂಡು ಬೆಳಪು ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡಿಕೊಂಡಿದ್ದರು.

ಆ ಸಮಯದಲ್ಲಿ  ಇನ್‌ಸ್ಟಾಗ್ರಾಮ್ ಖಾತೆಯ ವ್ಯಕ್ತಿಯೊಂದಿಗೆ ಸಮೀನಾಳಿಗೆ ಸಂಪರ್ಕ ಇರುವ ಬಗ್ಗೆ ಜಹೀರ್ ಗೆ ತಿಳಿದು ಬಂದಿರುತ್ತದೆ. ಇದನ್ನು ವಿರೋಧಿಸಿದ ಜಹೀರ್ ನನ್ನು ಸಮೀನಾಳು ಮನೆಯಿಂದ ಹೊರಗೆ ಹಾಕಿ ಮಕ್ಕಳನ್ನು ಸಂಪರ್ಕಿಸಲು ನಿರಾಕರಿಸಿದ್ದು, ಸಮೀನಾ ಮತ್ತು ಅವಳ ಸಹೋದರಿ ಆತ್ಮಾ ಹಾಗೂ ಇನ್‌ಸ್ಟಾಗ್ರಾಮ್ ಖಾತೆಯ ವ್ಯಕ್ತಿ ಸೇರಿಕೊಂಡು ಜಹೀರ್ ನಿಗೆ ನಿರಂತರ ಮಾನಸಿಕ ಹಿಂಸೆ ಕಿರುಕುಳ ನೀಡಿ ಅವಮಾನ ಮಾಡಿದ್ದರು.

ಇದನ್ನೂ ಓದಿ:

ಇದರಿಂದ ಮಾನಸಿಕವಾಗಿ ಮನನೊಂದ ಜಹೀರ್ ಅಬ್ದುಲ್ ಮಾಂಗಾವಕರ್ ಮೇ. 16 ರಂದು ಬೆಳಪುವಿನ ಜವನರಕಟ್ಟೆಯ ಪತ್ನಿ ಸಮೀನಾಳ ಮನೆಯ ಎದುರು ಇರುವ ಮಾವಿನ ಮರದ ಕೊಂಬೆಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಜಹೀರನು ಆತ್ಮಹತ್ಯೆ ಮಾಡಿಕೊಳ್ಳಲು ಸಮೀನಾ, ಆಕೆಯ ಸಹೋದರಿ ಆಸ್ಮಾ ಹಾಗೂ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪರಿಚಯವಾದ ವ್ಯಕ್ತಿ ಪ್ರಚೋದನೆ ಹಾಗೂ ಪ್ರೇರಣೆ ನೀಡಿರುವುದಾಗಿ ಅಫ್ಘಾನಾ ರಮಝಾನ್ ಕಾರ್ನೇಕರ್ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

38 minutes ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

2 hours ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

2 hours ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

2 hours ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

2 hours ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

2 hours ago