Featured

ಶಿರ್ವ: ಕಚ್ಚಾ ಸಾಮಾಗ್ರಿ ಕಾಯಿಲ್‌ ಪೂರೈಸುವುದಾಗಿ ನಂಬಿಸಿ ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು – Vishwanews24

ಶಿರ್ವ: ಕಚ್ಚಾ ಸಾಮಾಗ್ರಿ ಕಾಯಿಲ್‌ ಪೂರೈಸುವುದಾಗಿ ನಂಬಿಸಿ ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

ಶಿರ್ವ: ಬೆಳಪುವಿನಲ್ಲಿರುವ ರೂಫಿಂಗ್‌ ಶೀಟ್‌ ತಯಾರು ಮಾಡುವ ಘಟಕಕ್ಕೆ ಕಚ್ಚಾ ಸಾಮಾಗ್ರಿ ಕಾಯಿಲ್‌ ಪೂರೈಸುವುದಾಗಿ ನಂಬಿಸಿ ಹಣ ಪಡೆದು ಕಾಯಿಲ್‌ ನೀಡದೆ ವಂಚಿಸಿದ ಘಟನೆಯ ಬಗ್ಗೆ ಶಿರ್ವ ಠಾಣೆಯಲ್ಲಿ ದೂರು ದಾಖಲಾಗಿದೆ.

ದುರ್ಗಾ(55) ವಂಚನೆಗೊಳಗಾದವರು. ಅವರು ಕಾಪು ತಾಲೂಕಿನ ಬೆಳಪು ಇಂಡಸ್ಟ್ರಿಯಲ್‌ ಏರಿಯಾದಲ್ಲಿ ರೂಫಿಂಗ್‌ ಶೀಟ್‌ ತಯಾರು ಮಾಡುವ ಘಟಕವನ್ನು ಜ. 14 ರಂದು ಪ್ರಾರಂಭಿಸಿದ್ದರು. ಘಟಕದ ಕಚ್ಚಾ ಸಾಮಾಗ್ರಿಗಾಗಿ ಗೂಗಲ್‌ನಲ್ಲಿ ಸರ್ಚ್‌ ಮಾಡುತ್ತಿದ್ದ ವೇಳೆ ಅವರ ಮೊಬೈಲ್‌ಗೆ ಫ್ರಾನ್ಸಿಸ್‌ ಡಿಸೋಜಾ ಎಂಬ ಹೆಸರಿನ ವ್ಯಕ್ತಿ ಕರೆಮಾಡಿ ನಮ್ಮ ಬಳಿ ಒಳ್ಳೆಯ ಕಾಯಿಲ್‌ ಇದ್ದು ನೀವು ಹಣ ಕಳುಹಿಸಿದರೆ ಕಾಯಿಲ್‌ ಸರಬರಾಜು ಮಾಡುವುದಾಗಿ ನಂಬಿಸಿ ಪದೇಪದೇ ಕರೆ ಮಾಡಿದ್ದಾನೆ. ಆತ ಮುಂಬೈಗೆ ಬರುವಂತೆ ತಿಳಿಸಿದಂತೆ ದುರ್ಗಾ ಅವರು ಮಾ. 28ರಂದು ಮುಂಬೈಗೆ ತೆರಳಿದ್ದು, ಮಾ. 30 ರಂದು ಮುಂಬೈಯ ತಲೋಜ ಇಂಡಸ್ಟ್ರಿಯಲ್‌ ಏರಿಯಾಕ್ಕೆ ಬರುವಂತೆ ಲೊಕೇಶನ್‌ ಕಳುಹಿಸಿದ್ದಾನೆ. ದುರ್ಗಾ ಅವರು ಅಲ್ಲಿಗೆ ಹೋದಾಗ ಒಬ್ಬ ವ್ಯಕ್ತಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ನಿಂತಿದ್ದು, ತಾನೇ ಫ್ರಾನ್ಸಿಸ್‌ ಡಿಸೋಜಾ ಎಂದು ಪರಿಚಯಿಸಿಕೊಂಡು ಅಲ್ಲಿಯೇ ಇದ್ದ ಗೋಡೌನ್‌ ಒಳಗಡೆ ಕರೆದುಕೊಂಡು ಹೋಗಿ ಅಲ್ಲಿದ್ದ ಕಾಯಿಲ್‌ನ್ನು ತೋರಿಸಿ ಗೋಡೌನ್‌ ಮಾಲಿಕ ತಾನೇ ಎಂದು ತಿಳಿಸಿದ್ದಾನೆ.

ಆತನ ಮಾತನ್ನು ನಂಬಿ ಕಾಯಿಲ್‌ ಬೇಕು ಎಂದು ಒಪ್ಪಿ ಊರಿಗೆ ಹಿಂತಿರುಗಿ ಬಂದು ಮೂಲ್ಕಿಯ ಬ್ಯಾಂಕ್‌ ಆಫ್‌ ಬರೋಡಾ ಶಾಖೆಯಲ್ಲಿ 20 ಲ. ರೂ.ಸಾಲ ಮಾಡಿ ಸಾಲ ಮಂಜೂರಾದ ಬಳಿಕ ಎ. 18 ರಂದು ಫ್ರಾನ್ಸಿಸ್‌ ಡಿಸೋಜಾನಿಗೆ ಕರೆಮಾಡಿ ಹಣ ಯಾರ ಹೆಸರಿಗೆ ಕಳುಹಿಸಬೇಕು ಎಂದು ವಿಚಾರಿಸಿದ್ದಾರೆ. ಆತ ಕೊಟೇಶನ್‌ ಕಳುಹಿಸಿ ಮೊಬೈಲ್‌ ಮೂಲಕ ತಿಳಿಸಿದಂತೆ ಕೊಟೇಶನ್‌ನಲ್ಲಿದ್ದ ಖಾತೆ ನಂಬ್ರಕ್ಕೆ ಬ್ಯಾಂಕ್‌ ಆಫ್‌ ಬರೋಡಾ ಮೂಲ್ಕಿ ಶಾಖೆಯಿಂದ 8 ಲ. ರೂ. ಹಣವನ್ನು ಆರ್‌ಟಿಜಿಎಸ್‌ ಮೂಲಕ ಕಳುಹಿಸಿದ್ದಾರೆ. ಹಣ ಪಡೆದ ಬಳಿಕ ಆತನ ಮೊಬೈಲ್‌ ಸ್ವಿಚ್‌ಆಫ್‌ ಬರುತ್ತಿದ್ದು, ಮೊಬೈಲ್‌ನಲ್ಲಿ ಮೆಸೇಜ್‌ ಮೂಲಕ ಕಾಯಿಲ್‌ ಕೂಡಲೇ ಕಳುಹಿಸಿ ಕೊಡುತ್ತೇನೆಂದು ಉತ್ತರಿಸುತ್ತಿದ್ದಾನೆ. ಆದರೆ ಫ್ರಾನ್ಸಿಸ್‌ ಡಿಸೋಜಾ ಕಾಯಿಲ್‌ ನೀಡುವುದಾಗಿ ನಂಬಿಸಿ 8 ಲ. ರೂ. ಪಡೆದು ಕಾಯಿಲ್‌ ನೀಡದೆ,ಪಡೆದ ಹಣ ವಾಪಾಸು ನೀಡದೆ ನಂಬಿಕೆ ದ್ರೋಹ ಎಸಗಿದ್ದಾನೆಂದು ದುರ್ಗಾ ಅವರು ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

21 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

22 hours ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

2 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

2 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

2 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

2 days ago