Featured

ಶಿರ್ವ ಕೋರಾನ ಹೆಚ್ಚಳ : ತುರ್ತು ಸೇವೆ ಹೊರತುಪಡಿಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮದ ಜೊತೆಗೆ ದಂಡ ವಸೂಲು – Vishwanews24

ಶಿರ್ವ ಕೋರಾನ ಹೆಚ್ಚಳ : ತುರ್ತು ಸೇವೆ ಹೊರತುಪಡಿಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮದ ಜೊತೆಗೆ ದಂಡ ವಸೂಲು – Vishwanews24

ಶಿರ್ವ: ಉಡುಪಿ ಜಿಲ್ಲೆಯಲ್ಲಿ ಐವತ್ತಕ್ಕೂ ಅಧಿಕ ಕೋವಿಡ್ ಸೋಂಕಿತರಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಸಿಲ್ ಡೌನ್ ಮಾಡಲಾಗಿದ್ದು, ಕೋವಿಡ್ ಇನ್ನಷ್ಟು ಹರಡದಂತೆ ಜಿಲ್ಲಾಡಳಿತದ ಜೊತೆಗೆ ಸ್ಥಳೀಯ ಗ್ರಾಮಪಂಚಾಯತ್, ಟಾಸ್ಕ್ ಪೋರ್ಸ್ ಸಮಿತಿ ಮತ್ತು ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತಿವೆ.

ಇವೆಲ್ಲದರ ನಡುವೆ ತುರ್ತು ಸೇವೆಗಳನ್ನು ಹೊರತುಪಡಿಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮದ ಜೊತೆಗೆ ದಂಡ ವಿಧಿಸಲಾಗುತ್ತಿದೆ. ಜಿಲ್ಲೆಯ ಅತಿ ದೊಡ್ಡ ಗ್ರಾಮ ಪಂಚಾಯತ್ ಗಳಲ್ಲಿ ಒಂದಾಗಿರುವ ಶಿರ್ವ ಗ್ರಾಮ ಪಂಚಾಯತ್ ಸಿಲ್ ಡೌನ್ ಮಾಡಲಾಗಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷ ರಾಮರಾಯ ಪಾಟ್ಕರ್ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಮಿತಿ, ಕೋವಿಡ್ ಸಂಖ್ಯೆ ಇಳಿಮುಖವಾಗಲು ವಿಶೇಷ ಮುತುವರ್ಜಿ ವಹಿಸಿದೆ.

ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕ್ಷಿಪ್ತ ಕಾರ್ಯಾಚರಣೆ ನಡೆಸಿದ ಗ್ರಾಮಪಂಚಾಯತ್ ಟಾಸ್ಕ್ ಪೋರ್ಸ್ ಸಮಿತಿ ಮತ್ತು ಪೊಲೀಸ್ ಇಲಾಖೆ, ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಕೈಗೊಂಡಿದೆ. ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಚಾರವಾಗುವ ಪ್ರಮುಖ 2 ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ ಟಾಸ್ಕ್ ಪೋರ್ಸ್ ಸಮಿತಿ, ತುರ್ತು ಮತ್ತು ಉದ್ಯೋಗಕ್ಕೆ ತೆರಳುವವರಿಗೆ ಮಾತ್ರ ಗ್ರಾಮದಿಂದ ಹೊರಹೋಗಲು ಅವಕಾಶ ನೀಡಿದೆ.

ಅನಗತ್ಯ ತಿರುಗಾಟ ಮಾಡುವವರಿಗೆ ದಂಡ ವಿಧಿಸಿದ್ದು ಮಾತ್ರವಲ್ಲದೆ, ಹಿಂದಕ್ಕೆ ಕಳಿಸುವ ಕೆಲಸವನ್ನು ಮಾಡಿದೆ. ನಿಯಮ ಉಲ್ಲಂಘಿಸಿದ ಅಂಗಡಿ ಮಾಲಕರೋರ್ವರಿಗೆ ದಂಡ ವಿಧಿಸಿದ ಘಟನೆಯೂ ನಡೆದಿದೆ. ಮಾತ್ರವಲ್ಲದೆ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷ ರಾಮರಾಯ ಪಾಟ್ಕರ್ ಮತ್ತು ಪ್ರಮುಖರು ಸಾರ್ವಜನಿಕರಲ್ಲಿ ಮನೆಯಿಂದ ಹೊರಬರದಂತೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಕಾರ್ಯಾಚರಣೆಯ ಸಂದರ್ಭದಲ್ಲಿ ಗ್ರಾಮಕರಣಿಕ ವಿಜಯ್, ಪಿಡಿಒ ಪದ್ಮನಾಭ ನಾಯಕ್, ಆಶಾ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಪೊಲೀಸ್ ಇಲಾಖೆ ಸಹಕರಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago