ಶಿರ್ವ : ಫೆ. 15 ರಂದು ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಜೆಪಿ ಬೆಂಬಲಿತ ಗ್ರೆಗೋರಿ ಕೊನ್ರಾಡ್ ಕ್ಯಾಸ್ತಲಿನೋ ಅವರ ನಿಧನದಿಂದ ತೆರವಾಗಿದ್ದ ಶಿರ್ವ ಗ್ರಾ.ಪಂ. ಅಧ್ಯಕ್ಷ ಗಾದಿಗೆ ಚುನಾವಣೆ ನಡೆದು ಅಧ್ಯಕ್ಷ ಗಾದಿ ಕಾಂಗ್ರೆಸ್ ಪಾಲಾಗಿದೆ.
ಕಾಂಗ್ರೆಸ್ ಬೆಂಬಲಿತ ಕೆ.ಆರ್.ಪಾಟ್ಕರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಗಾದಿಗಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ. ಆರ್ ಪಾಟ್ಕರ್ ಮತ್ತು ಬಿಜೆಪಿ ಬೆಂಬಲಿತ ಪ್ರವೀಣ್ ಸಾಲ್ಯಾನ್ ನಾಮಪತ್ರ ಸಲ್ಲಿಸಿದ್ದರು. 18-16 ಮತಗಳ ಅಂತರದಿಂದ ಪಾಟ್ಕರ್ ಜಯಶಾಲಿಯಾಗಿದ್ದಾರೆ. ಅಂದು ಕಾಂಗ್ರೆಸ್ ಬೆಂಬಲಿತ 19 ಸದಸ್ಯರಿದ್ದರೂ ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿ ಬೆಂಬಲಿತರು ಅಧ್ಯಕ್ಷ ರಾಗಿ ಆಯ್ಕೆಯಾಗಿದ್ದರು. ಕಳೆದ ಅವಧಿಯಲ್ಲಿಯೂ ಕಾಂಗ್ರೆಸ್ ಗೆ ಬಹುಮತವಿದ್ದರೂ ಬಿಜೆಪಿ ಬೆಂಬಲಿತರು ಅಧ್ಯಕ್ಷ ರಾಗಿ ಆಯ್ಕೆ ಯಾಗಿದ್ದರು.
ಫೆಬ್ರವರಿಯಲ್ಲಿ ಅಧ್ಯಕ್ಷ ರ ಚುನಾವಣೆ ಗೆ ಮೊದಲು ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ದಿ.ಕೊನ್ರಾಡ್ ಕ್ಯಾಸ್ತಲಿನೋ ಮತ್ತು 3 ಸದಸ್ಯರು ಹಾಗೂ ಇತರೆ ಬೆಂಬಗಲಿಗರೊಂದಿಗೆ ಅಧಿಕೃತ ವಾಗಿ ಬಿಜೆಪಿಗೆ ಸೇರ್ಪಡೆ ಗೊಂಡಿದ್ದು ಅಧ್ಯಕ್ಷ ಗಾದಿ ಬಿಜೆಪಿ ಪಾಲಾಗಿತ್ತು. ಮಾ.29 ರಂದು ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಶ್ರೀನಿವಾಸ ಶೆಣೈ ಸದಸ್ಯ ರಾಗಿ ಆಯ್ಕೆ ಯಾಗಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…