ಶಿರ್ವ: ಮಂಗಳೂರಿನಿಂದ ಶಿರ್ವಕ್ಕೆ ಬರುತ್ತಿದ್ದ ಮಾರುತಿ ಡಿಸೈರ್ ಕಾರೊಂದು ರಸ್ತೆ ಮಧ್ಯದಲ್ಲೇ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಬಳಿ ನಡೆದಿದೆ.
ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ :
ಘಟನೆಯ ವಿವರ:
ಸೋಮವಾರ ತಡರಾತ್ರಿ ಮಂಗಳೂರಿನಿಂದ ಶಿರ್ವದತ್ತ ಸಾಗುತ್ತಿದ್ದ ಕಾರು ನ್ಯಾರ್ಮ ಪರಿಸರಕ್ಕೆ ತಲುಪುತ್ತಿದ್ದಂತೆ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ, ಅದರಲ್ಲಿದ್ದ ಮನೆಯ ನಾಲ್ವರು ಸದಸ್ಯರನ್ನು ತಕ್ಷಣವೇ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಎಲ್ಲರೂ ಕೆಳಗಿಳಿಯುತ್ತಿದ್ದಂತೆ ಬೆಂಕಿ ಇಡೀ ಕಾರನ್ನು ಆವರಿಸಿದ್ದು, ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಧಾವಿಸಿ ಬಂದಿದ್ದಾರೆ. ಅಕ್ಕಪಕ್ಕದ ಮನೆಗಳಿಂದ ಪೈಪ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಅಷ್ಟರಲ್ಲಾಗಲೇ ಬೆಂಕಿ ಕೆನ್ನಾಲಗೆ ಚಾಚಿದ್ದರಿಂದ ಕಾರು ಸಂಪೂರ್ಣ ಭಸ್ಮವಾಗಿದೆ.
ಇದನ್ನೂ ಓದಿ :
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…