ಉಡುಪಿ: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಹಾಡಲು ಜಿಲ್ಲಾ ಪೊಲೀಸರು ಮುಂದಾಗಿದ್ದಾರೆ.
ಪ್ರಕರಣ ಸಂಬಂಧಿಸಿ ಹೆಚ್ಚಿನ ತನಿಖೆಯನ್ನು ಪೊಲೀಸರು ಈಗಾಗಲೇ ಪೂರ್ಣಗೊಳಿಸಿದ್ದು, ಕೊಲೆಯ ಪ್ರಮುಖ ರೂವಾರಿಗಳ ಮಾಹಿತಿ ಜಿಲ್ಲೆಯಲ್ಲೇ ಪತ್ತೆಯಾಗಿದೆ ಎನ್ನಲಾಗಿದೆ. ಕೊಲೆ ಮಾಡಲು ಸುಪಾರಿ ಕೊಲೆಗಾರರನ್ನು ಕಳುಹಿಸಿದ ಮಧ್ಯವರ್ತಿಯನ್ನು ಪೊಲೀಸರು ಹೊರ ರಾಜ್ಯದಲ್ಲಿ ಹುಡುಕಾಡುತ್ತಿದ್ದು, ಕೊಲೆಯ ಉದ್ದೇಶದೊಂದಿಗೆ ಪ್ರಕರಣದ ಆರೋಪಿಗಳ ಮಾಹಿತಿಯನ್ನು ಪೊಲೀಸರು ಶೀಘ್ರದಲ್ಲಿ ಬಯಲಿಗೆಳೆಯಲಿದ್ದಾರೆ ಎನ್ನಲಾಗಿದೆ.
ಡೇವಿಡ್ ಡಿಸೋಜಾ ಅವರನ್ನು ಕೊಲೆ ಮಾಡಿದ ಮೂವರು ಆರೋಪಿಗಳು ಜಿಲ್ಲೆಗೆ ಭೇಟಿ ನೀಡಿದ ಬಳಿಕ ಆ್ಯಪ್ ಮೂಲಕವೇ ಒಬ್ಬರಿಗೊಬ್ಬರು ಸಂವಹನ ನಡೆಸಿ ಯೋಜನೆ ಹಾಕುತ್ತಿದ್ದರು ಎನ್ನಲಾಗಿದೆ. ಆರೋಪಿಗಳನ್ನು ಹಿಡಿದು ವಿಚಾರಣೆ ನಡೆಸಿದಾಗ ಈ ಬಗ್ಗೆ ಆರೋಪಿಗಳು ಬಾಯ್ದಿಟ್ಟಿದ್ದು, ಪೊಲೀಸರು ಅವರ ಆ್ಯಪ್ ಪರಿಶೀಲಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…