Featured

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು

ಶಿರ್ವ : ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ವಾಹನವನ್ನು ಓವರ್ಟೇಕ್ ಮಾಡುವ ಭರದಲ್ಲಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಆ. 7 ರಂದು ರಾತ್ರಿ 7-30ಕ್ಕೆ ಶಿರ್ವ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ನಡೆದಿದೆ.

ಶಿರ್ವ ಇಂದ್ರಪುರ ನಿವಾಸಿ, ಶಿರ್ವ ದೇವಿ ವೈಂಡಿಂಗ್ ಸೆಂಟರ್’ನ ಮಾಲಕ ಪ್ರಕಾಶ್ ಆಚಾರ್ಯ(45) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ. ಪ್ರಕಾಶ್ ಆಚಾರ್ಯ ಅವರು ಪೆಟ್ರೋಲ್ ಪಂಪ್ ಎದುರುಗಡೆ ಇರುವ ಕುತ್ಯಾರು ರಸ್ತೆಯಲ್ಲಿ ತನ್ನ ಮನೆ ಕಡೆ ತೆರಳಲು ಮುಖ್ಯರಸ್ತೆ ಬದಿ ನಿಂತಿದ್ದರು.

ಈ ವೇಳೆ ಬೆಳ್ಮಣ್ ಕಡೆಯಿಂದ ವೇಗವಾಗಿ ಬಂದ ಸ್ವಿಫ್ಟ್ ಕಾರು ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುವ ರಭಸದಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದು ಸ್ಕೂಟಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಶಿರ್ವಪೊಲೀಸರು ತನಿಖೆ ನಡೆಸುತ್ತಿದ್ದಾರೆ

Vishwa News 24

Recent Posts

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

51 minutes ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

58 minutes ago

ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು -vishwanews24

ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು ಕೊಟ್ಟಿಗೆಹಾರ: ವಿಲ್ಪುರಂ - ಮಂಗಳೂರು…

1 hour ago

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು -vishwanews24

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು…

1 hour ago

ಡೇವಿಡ್ ಡಿಸೋಜ ಕೊಲೆ ಪ್ರಕರಣ : ಆರೋಪಿ ಬಂಧನ  -vishwanews24

ಉಡುಪಿ: ಡೇವಿಡ್ ಡಿಸೋಜ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ; ಶೂಟರ್ ಕಾಲಿಗೆ ಗುಂಡೇಟು…

2 hours ago

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

18 hours ago