Featured

ಶಿರ್ವ :  ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣ ; ಐವರು ಆರೋಪಿಗಳ ಬಂಧನ – vishwanews24

ಶಿರ್ವ :  ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣ ; ಐವರು ಆರೋಪಿಗಳ ಬಂಧನ

ಉಡುಪಿ: ಬ್ಯಾಂಕ್ಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಅಡಮಾನ ಇಟ್ಟು ಸಾಲ ಪಡೆದ ವಂಚನೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಅಂಬಪಾಡಿ ಕಪ್ಪಟ್ಟು ನಿವಾಸಿ ಪುನೀತ್ ಆನಂದ ಕೋಟ್ಯಾನ್, ತೆಂಕನಿಡಿಯೂರು ಲಕ್ಷ್ಮೀನಗರ ನಿವಾಸಿ ಸುದೀಪ್, ಏಣಗುಡ್ಡೆ ನಿವಾಸಿ ರಂಜನ್ ಕುಮಾರ್, ಪೆರ್ಡೂರು ನಿವಾಸಿ ಸರ್ವಜಿತ್ ಹೆಚ್ ಕೆ ಮತ್ತು ಮಹಾರಾಷ್ಟ್ರ ಪುಣೆ ನಿವಾಸಿ ರಾಜೇಶ್ ದಿಲೀಪ್ ಪಾಟೀಲ್ ಎಂದು ಗುರುತಿಸಲಾಗಿದೆ.

ದಿನಾಂಕ 30-10-2025 ರಂದು, ಕರ್ನಾಟಕ ಬ್ಯಾಂಕ್ ಕಟ್ಟಿಂಗೇರಿ ಶಾಖಾ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ, ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 74/2025, 75/2025, 76/2025, 77/2025 ಅಡಿ ಕಲಂ 316(2), 318(4), 3(5) ಬಿ.ಎನ್.ಎಸ್ – 2023 ಪ್ರಕಾರ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

ದೂರು ಪ್ರಕಾರ, ಆರೋಪಿತರು ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ತೋರಿಸಿ ಬ್ಯಾಂಕ್ನಲ್ಲಿ ಅಡಮಾನ ಇಟ್ಟು ಸಾಲ ಪಡೆದು ವಂಚನೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ಇತ್ತೀಚೆಗೆ ಇಂತಹ ನಕಲಿ ಚಿನ್ನದ ಅಡಮಾನ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ, ಉಡುಪಿ ವೃತ್ತ ನಿರೀಕ್ಷಕ ಕಾಪು ಅವರ ನೇತೃತ್ವದಲ್ಲಿ ಮೂರು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಬೆಂಗಳೂರು, ಗೋವಾ, ಮುಂಬೈ ಮತ್ತು ದೆಹಲಿಗಳಲ್ಲಿ ಹುಡುಕಾಟ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಪೊಲೀಸರು ಆರೋಪಿಗಳಿಂದ ₹4,30,000 ನಗದು, ನಕಲಿ ಹಾಲ್ಮಾರ್ಕ್ ಮಾಡಲು ಬಳಸಿದ ಲೇಸರ್ ಯಂತ್ರ ಹಾಗೂ ಕಂಪ್ಯೂಟರ್ ವಶಪಡಿಸಿಕೊಂಡಿದ್ದಾರೆ.

ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

ತನಿಖೆಯ ವೇಳೆ ಆರೋಪಿತರು ಬ್ರಹ್ಮಾವರ, ಹಿರಿಯಡ್ಕ ಹಾಗೂ ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿಯೂ ಇದೇ ರೀತಿಯ ನಕಲಿ ಚಿನ್ನ ಅಡಮಾನ ವಂಚನೆ ಪ್ರಕರಣಗಳಲ್ಲಿ ತೊಡಗಿಸಿಕೊಂಡಿರುವುದು ಪತ್ತೆಯಾಗಿದೆ.

ಈ ಯಶಸ್ವಿ ಕಾರ್ಯಾಚರಣೆ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರಿಯಂವದಾ (ಐಪಿಎಸ್) ಹಾಗೂ ಕಾಪು ವೃತ್ತ ನಿರೀಕ್ಷಕರಾದ ಅಜ್ಮತ್ ಆಲಿ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಶಿರ್ವ ಪಿಎಸ್ಐ ಮಂಜುನಾಥ ಮರಬದ, ಪಿಎಸ್ಐ ಲೋಹಿತ್ ಕುಮಾರ್ ಸಿ.ಎಸ್, ಪಡುಬಿದ್ರೆ ಪಿಎಸ್ಐ ಅನಿಲ್ಕುಮಾರ್ ಟಿ ನಾಯ್ಕ್, ಎಎಸ್ಐ ಶ್ರೀಧರ್ ಕೆ.ಜೆ. ಹಾಗೂ ಶಿರ್ವ ಮತ್ತು ಪಡುಬಿದ್ರೆ ಠಾಣಾ ಸಿಬ್ಬಂದಿ ಕಿಶೋರ್, ಮಂಜುನಾಥ, ಅರುಣ್, ಸಿದ್ದರಾಯಪ್ಪ, ನಾಗರಾಜ ಮತ್ತು ಸಿಹೆಚ್ಸಿ 68 ನಾಗರಾಜ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

3 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

3 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

3 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

5 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

5 hours ago