ಶಿರ್ವ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಸಲುವಾಗಿ ಪೊಲೀಸ್ ಇಲಾಖೆ ಮತ್ತು ಕ್ಷಿಪ್ರಕಾರ್ಯಾಚರಣೆ ಪಡೆ ಸನ್ನದ್ಧರಾಗಿದ್ದು, ಶಿರ್ವ ಪರಿಸರದ ಜನತೆಯಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಚುನಾವಣಾ ಪೂರ್ವಭಾವಿಯಾಗಿ ಸೋಮವಾರ ಸಂಜೆ ಪಥಸಂಚಲನ ನಡೆಯಿತು.
ಉಡುಪಿ ಜಿಲ್ಲಾ ಕಾಪು ವೃತ್ತ ವ್ಯಾಪ್ತಿಯ ಶಿರ್ವ ಮಂಚಕಲ್ ಪೇಟೆಯಲ್ಲಿ ಸಶಸ್ತ್ರಧಾರಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು ಮತ್ತು ಕಾಪು, ಶಿರ್ವ ಮತ್ತು ಪಡುಬಿದ್ರಿ ಠಾಣೆಯ ಸಿಬಂದಿಯೊಂದಿಗೆ ಶಿರ್ವ ಆರೋಗ್ಯ ಮಾತಾ ದೇವಾಲಯದ ದ್ವಾರದ ಬಳಿಯಿಂದ ಶಿರ್ವ ಪೊಲೀಸ್ ಠಾಣೆಯವರೆಗೆ ಪಥ ಸಂಚಲನ ನಡೆಯಿತು.
ಕಾಪು ಕ್ಷೇತ್ರ ಚುನಾವಣಾಧಿಕಾರಿ ಬಿನೋಯ್, ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ, ಕ್ಷಿಪ್ರ ಕಾರ್ಯಾಚರಣೆ ಪಡೆಯ ಇನ್ಸ್ಪೆಕ್ಟರ್ಗಳಾದ ಟಿ.ಕೆ.ಪಾಂಡೆ ಮತ್ತು ಗಿರೀಶ್ ಪ್ರಸಾದ್, ಪಡುಬಿದ್ರಿ ಠಾಣೆಯ ಪಿಎಸ್ಐಗಳಾದ ಪುರುಷೋತ್ತಮ್ ಮತ್ತು ಶಿವರುದ್ರಮ್ಮ, ಕಾಪು ಪಿಎಸ್ಐ ಭರತೇಶ್, ಶಿರ್ವ ಪಿಎಸ್ಐ ರಾಘವೇಂದ್ರ .ಸಿ ಹಾಗೂ ಸುಮಾರು 100 ಯೋಧರು ಹಾಗೂ ಕಾಪು, ಪಡುಬಿದ್ರಿ ಮತ್ತು ಶಿರ್ವ ಠಾಣೆಯ 100ಕ್ಕೂ ಹೆಚ್ಚು ಪೊಲೀಸ್ ಸಿಬಂದಿ ಪಥಸಂಚಲನದಲ್ಲಿ ಭಾಗವಹಿಸಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…