ಶಿರ್ವ: ಇಲ್ಲಿನ ಪೊಲೀಸ್ ಠಾಣೆಯ ವ್ಯಾಪ್ತಿಯ ಕುರ್ಕಾಲು ಮತ್ತು ಬಂಟಕಲ್ಲಿನಲ್ಲಿ 2020ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಬಾಗಲಕೋಟೆಯ ಬಿಲ್ಕೆನೂರು ಜುಮ್ಮಾ ಮಸೀದಿ ಬಳಿಯ ನಿವಾಸಿ ವಿಜಯ ಹುಲಗಪ್ಪ ವಡ್ಡರ್ ಪ್ರೊಕ್ಲಮೇಶನ್ ವಾರೆಂಟ್ ಅಸಾಮಿಯನ್ನು ಶಿರ್ವ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ. (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಅನಿಲ್ ಕುಮಾರ್ ಟಿ. ನಾಯ್ಕ(ತನಿಖೆ) ಅವರ ಮಾರ್ಗದರ್ಶನದಂತೆ ಎಎಸ್ಐ ವಿವೇಕಾನಂದ ಮತ್ತು ಪಿಸಿಗಳಾದ ರಘು ಮತ್ತು ಮಂಜುನಾಥ ನಾಯ್ಕ ಮಾ. 10 ರಂದು ಕಾರವಾರದಲ್ಲಿ ಬಂಧಿಸಿ ಕರೆತಂದಿದ್ದಾರೆ.
ಹೆಡ್ಕಾನ್ಸ್ಟೇಬಲ್ ಭಾಸ್ಕರ್ ಮತ್ತು ಪಿಸಿ ವಿನೋದ್ ಆರೋಪಿಯನ್ನು ಮಾ. 11 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಮಾ. 13 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಈತನ ಮೇಲೆ ಶಿರ್ವ, ಕಾಪು, ವೇಣೂರು, ಮೂಡುಬಿದಿರೆ, ಕಾವೂರು, ಅಂಕೋಲಾ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…