Featured

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು

ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಭಾಗದ ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ತನಿಖೆ ಆರಂಭಿಸಲಾಗಿದೆ.

ಜೂನ್ 1ರಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಕಲ್ಲೊಟ್ಟು ಸೇತುವೆಯ ಕೆಳಭಾಗದಲ್ಲಿರುವ ಪಾಪನಾಶಿನಿ ಹೊಳೆಯ ನೀರಿನಲ್ಲಿ ಜಾನುವಾರಿನ ತಲೆಬುರುಡೆ ಹಾಗೂ ಕಾಲಿನ ಗೆರಸುಗಳು ಕಂಡುಬಂದಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಶಿರ್ವ ಪೊಲೀಸ್ ಠಾಣೆಯ ಎಎಸ್‌ಐ ಸುರೇಶ್ ಕುಮಾರ್ ಹಾಗೂ ಪಿಸಿ ಅರುಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಹೊಳೆಯ ನೀರಿನಲ್ಲಿ ಜಾನುವಾರಿನ ಅವಶೇಷಗಳು ಇರುವುದನ್ನು ದೃಢಪಡಿಸಿಕೊಂಡರು.

ಬಳಿಕ ಕಾಪು ಪಶು ಆಸ್ಪತ್ರೆಯ ಉಪ ನಿರ್ದೇಶಕರು, ಉಡುಪಿ ಜಿಲ್ಲಾ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿಗಳು ಹಾಗೂ ಪಂಚ ಸಾಕ್ಷಿದಾರರನ್ನು ಸ್ಥಳಕ್ಕೆ ಕರೆಸಿ ಮಹಜರು ನಡೆಸಲಾಯಿತು. ಪಶು ಸಹಾಯಕ ನಿರ್ದೇಶಕರು ಪರಿಶೀಲಿಸಿದ ವೇಳೆ ಹೊಳೆಯ ದಕ್ಷಿಣ ಭಾಗದ ನೀರಿನಲ್ಲಿ ಜಾನುವಾರಿನ ತಲೆಯ ಮೇಲ್ದವಡೆಯ ಸಂಪೂರ್ಣ ಭಾಗ, ಹಲ್ಲುಗಳು ಹಾಗೂ ಮೂಗಿನ ಭಾಗ ಕಂಡುಬಂದಿದ್ದು, ಅದು ಹಸುವಿನದ್ದಾಗಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಇದಲ್ಲದೆ, ಸ್ವಲ್ಪ ದೂರದಲ್ಲಿ ಜಾನುವಾರಿನ ಕಾಲಿನ ಎರಡು ಗೆರಸುಗಳು, ಮಾಂಸದ ತುಣುಕುಗಳು ಹಾಗೂ ಹೊಟ್ಟೆಯ ಒಳಭಾಗದ ಅವಶೇಷಗಳು ಪತ್ತೆಯಾಗಿದ್ದು, ಇವುಗಳೂ ಹಸುವಿನದ್ದಾಗಿರಬಹುದೆಂದು ತಿಳಿದುಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ಯಾರೋ ದುಷ್ಕರ್ಮಿಗಳು ಹಸುವನ್ನು ವಧೆ ಮಾಡಿ ಮಾಂಸ ಮಾಡಿಕೊಂಡು ಅದರ ಅವಶೇಷಗಳನ್ನು ಹೊಳೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಮರಬದ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ.

ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸೇರಿದಂತೆ ಹಿಂದೂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ, ಅಧಿಕಾರಿಗಳನ್ನು ಸಮಗ್ರ ತನಿಖೆ ನಡೆಸಿ ಕೃತ್ಯಕ್ಕೆ ಕಾರಣರಾದವರನ್ನು ಗುರುತಿಸುವಂತೆ ಒತ್ತಾಯಿಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago