ಶಿರ್ವ: ಇಲ್ಲಿಗೆ ಸಮೀಪದ ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶ ಮತ್ತು ಸೂಡ ಗ್ರಾಮದಲ್ಲಿ ಕಾಡುಕೋಣಗಳ ಹಾವಳಿ ವಿಪರೀತವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಕಾಡಿನಂಚಿನ ಬಳಿಯ ಕೃಷಿ ಭೂಮಿಗೆ ಕಾಡುಕೋಣಗಳು ದಾಳಿ ನಡೆಸುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬಳಿ ಸೋಮವಾರ 3 ಭಾರೀ ಗಾತ್ರದ ಕಾಡುಕೋಣಗಳು ಮತ್ತು ಸುಮಾರು ನಾಲ್ಕೈದು ಮರಿ ಕೋಣಗಳು ಕಂಡು ಬಂದಿದ್ದು ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರು ಭಯಭೀತರಾಗಿದ್ದಾರೆ.
ಸುಮಾರು ಏಳೆಂಟು ಕಾಡುಕೋಣಗಳ ಹಿಂಡು ಕೃಷಿ ಭೂಮಿಗೆ ಲಗ್ಗೆ ಇಡುತ್ತಿದ್ದು, ಪಿಲಾರು ಗ್ರಾಮದ ಮಜಲಬೆಟ್ಟು, ಮಿತ್ತಬೆಟ್ಟು, ಕುದ್ರೆಬೆಟ್ಟು, ಗುಂಡುಪಾದೆ ಬಳಿ ಮತ್ತು ಸೂಡ ಗ್ರಾಮದ ಕಾಡಿನಂಚಿನಲ್ಲಿ ಬೆಳೆದ ಭತ್ತದ ಗದ್ದೆ, ತರಕಾರಿ, ಬಾಳೆ, ಅಡಿಕೆ ಮತ್ತಿತರ ಕೃಷಿಯನ್ನು ಹಾಳುಗೆಡವುತ್ತಿವೆ.
ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಭಯಭೀತರಾಗಿದ್ದ ಜನರು ಮತ್ತು ಕೃಷಿಕರ ಹಿತ ಕಾಯಬೇಕೆಂದು ಪ್ರಗತಿಪರ ಕೃಷಿಕ ಪಿಲಾರು ಮಿತ್ತಬೆಟ್ಟು ಅರುಣ್ ಡಿಸೋಜಾ ಮತ್ತು ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪಿಲಾರು ವಾದಿರಾಜ ಉಡುಪ ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆ ಕಾಡುಕೋಣಗಳ ಹಾವಳಿಗೆ ಕ್ರಮಕೈಗೊಳ್ಳಲು ಪ್ರಯತ್ನಿಸುತ್ತಿದ್ದು, ಅರಣ್ಯ ಪ್ರದೇಶದಲ್ಲಿ ಅಡ್ಡಾಡುವ ಜನರು ಜಾಗರೂಕರಾಗಿರಬೇಕೆಂದು ಸ್ಥಳೀಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…