ಶಿರ್ವ: ಇಲ್ಲಿಗೆ ಸಮೀಪದ ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶ ಮತ್ತು ಸೂಡ ಗ್ರಾಮದಲ್ಲಿ ಕಾಡುಕೋಣಗಳ ಹಾವಳಿ ವಿಪರೀತವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಕಾಡಿನಂಚಿನ ಬಳಿಯ ಕೃಷಿ ಭೂಮಿಗೆ ಕಾಡುಕೋಣಗಳು ದಾಳಿ ನಡೆಸುತ್ತಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬಳಿ ಸೋಮವಾರ 3 ಭಾರೀ ಗಾತ್ರದ ಕಾಡುಕೋಣಗಳು ಮತ್ತು ಸುಮಾರು ನಾಲ್ಕೈದು ಮರಿ ಕೋಣಗಳು ಕಂಡು ಬಂದಿದ್ದು ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರು ಭಯಭೀತರಾಗಿದ್ದಾರೆ.
ಸುಮಾರು ಏಳೆಂಟು ಕಾಡುಕೋಣಗಳ ಹಿಂಡು ಕೃಷಿ ಭೂಮಿಗೆ ಲಗ್ಗೆ ಇಡುತ್ತಿದ್ದು, ಪಿಲಾರು ಗ್ರಾಮದ ಮಜಲಬೆಟ್ಟು, ಮಿತ್ತಬೆಟ್ಟು, ಕುದ್ರೆಬೆಟ್ಟು, ಗುಂಡುಪಾದೆ ಬಳಿ ಮತ್ತು ಸೂಡ ಗ್ರಾಮದ ಕಾಡಿನಂಚಿನಲ್ಲಿ ಬೆಳೆದ ಭತ್ತದ ಗದ್ದೆ, ತರಕಾರಿ, ಬಾಳೆ, ಅಡಿಕೆ ಮತ್ತಿತರ ಕೃಷಿಯನ್ನು ಹಾಳುಗೆಡವುತ್ತಿವೆ.
ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಭಯಭೀತರಾಗಿದ್ದ ಜನರು ಮತ್ತು ಕೃಷಿಕರ ಹಿತ ಕಾಯಬೇಕೆಂದು ಪ್ರಗತಿಪರ ಕೃಷಿಕ ಪಿಲಾರು ಮಿತ್ತಬೆಟ್ಟು ಅರುಣ್ ಡಿಸೋಜಾ ಮತ್ತು ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಪಿಲಾರು ವಾದಿರಾಜ ಉಡುಪ ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆ ಕಾಡುಕೋಣಗಳ ಹಾವಳಿಗೆ ಕ್ರಮಕೈಗೊಳ್ಳಲು ಪ್ರಯತ್ನಿಸುತ್ತಿದ್ದು, ಅರಣ್ಯ ಪ್ರದೇಶದಲ್ಲಿ ಅಡ್ಡಾಡುವ ಜನರು ಜಾಗರೂಕರಾಗಿರಬೇಕೆಂದು ಸ್ಥಳೀಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…