ಶಿರ್ವ: ಆತ್ರಾಡಿ -ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿಯ ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಸಮೀಪ ಬೃಹತ್ ಗಾತ್ರದ ಕಾಡುಕೋಣವೊಂದು ಬುಧವಾರ ಬೆಳಗ್ಗೆ 10 -15ರ ವೇಳೆಗೆ ಮುಖ್ಯರಸ್ತೆಯಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದು ವಾಹನ ಸವಾರರು ಸ್ವಲ್ಪದಲ್ಲಿಯೇ ಪಾರಾಗಿದ್ದಾರೆ. ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶದ ಸುತ್ತ ತಂತಿ ಬೇಲಿ ಹಾಕಲಾಗಿದ್ದು, ಕಾಡುಕೋಣ ಕಾಡಿನೊಳಕ್ಕೆ ಹೋಗಲಾಗದೆ ಸುತ್ತಾಡಿ ಬಳಿಕ ಕಾಡಿನೊಳಕ್ಕೆ ಹೋಗಿದೆ.
ಕಳೆದ ಎ. 18 ರಂದು ರಾತ್ರಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದ ಕಾರಿಗೆ ಅಭಯಾರಣ್ಯದಿಂದ ರಸ್ತೆದಾಟಲು ಯತ್ನಿಸುತ್ತಿದ್ದ ಕಾಡುಕೋಣ ಢಿಕ್ಕಿ ಹೊಡೆದು ಕಾರಿಗೆ ಹಾನಿ ಸಂಭವಿಸಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದರು. ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸುತ್ತಮುತ್ತ ಭಾರೀ ಗಾತ್ರದ ಕಾಡುಕೋಣಗಳು ಮತ್ತು ಮರಿ ಕೋಣಗಳು ಸುತ್ತಾಡುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ಕೂಡ ಭಯಭೀತರಾಗಿದ್ದಾರೆ.
ಕಾಡು ಪ್ರಾಗಳ ಹಾವಳಿ ತಪ್ಪಿಸಲು ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶದ ಸುತ್ತ ತಂತಿ ಬೇಲಿ ನಿರ್ಮಿಸಲಾಗಿದೆ. ಈ ಪ್ರದೇಶದ ರಸ್ತೆಯಲ್ಲಿ ಪ್ರಯಾಸುವ ವಾಹನ ಸವಾರರು ಕರ್ಕಶ ಹಾರ್ನ್ ಬಳಸದೆ ಮಿತ ವೇಗದಲ್ಲಿ ಚಲಿಸಬೇಕಾಗಿದೆ. ಕಾಡುಕೋಣಗಳ ಹಾವಳಿಗೆ ಕ್ರಮಕೈಗೊಳ್ಳಲು ಅರಣ್ಯಇಲಾಖೆ ಪ್ರಯತ್ನಿಸುತ್ತಿದ್ದು,ಅರಣ್ಯ ಪ್ರದೇಶದಲ್ಲಿ ಅಡ್ಡಾಡುವ ಜನರು ಜಾಗರೂಕರಾಗಿರಬೇಕೆಂದು ಉಪ ವಲಯ ಅರಣ್ಯಾಧಿಕಾರಿ ಜೀವನ್ದಾಸ್ ಶೆಟ್ಟಿ, ತಿಳಿಸಿದ್ದಾರೆ.
ರಸ್ತೆಯಲ್ಲಿ ಅಡ್ಡಾಡುತ್ತಿರುವ ಕಾಡುಕೋಣವನ್ನು ವಾಹನದಲ್ಲಿ ಪ್ರಯಾಣಿಸುತ್ತಿರುವ ಗ್ರಾ.ಪಂ. ಸದಸ್ಯ ವಿಜಯ್ ಧೀರಜ್ ಸೆರೆಹಿಡಿದಿದ್ದು ವೈರಲ್ ಆಗಿದೆ.’
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…