ಉಡುಪಿ : ಬೈಕ್ಗೆ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯಲ್ಲಿ ಗುರುವಾರ ಸಂಭವಿಸಿದೆ.
ಬಂಟಕಲ್ಲಿನ ಬೈದಶ್ರೀ ಫ್ಯಾನ್ಸಿ ಸ್ಟೋರ್ನ ಮಾಲಕ ಶಂಕರ ಕೋಟ್ಯಾನ್ (60) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮಧ್ಯಾಹ್ನ ಬೈಕ್ಗೆ ಪೆಟ್ರೋಲ್ ಹಾಕಲು ಪೆಟ್ರೋಲ್ ಪಂಪ್ಗೆ ತೆರಳುತ್ತಿದ್ದ ವೇಳೆ ಬಂಟಕಲ್ಲು ಪೇಟೆಯಲ್ಲಿನ ಬ್ಯಾರಿಕೇಡ್ ಬಳಿ ಶಂಕರಪುರ ಕಡೆಯಿಂದ ವೇಗವಾಗಿ ಬಂದ ರಿಕ್ಷಾ ಢಿಕ್ಕಿ ಹೊಡೆದಿದೆ.
ಮಂಗಳೂರು: ಪರೇಶ್ ಮೇಸ್ತ ಕೇಸ್ ಮರು ತನಿಖೆಗೆ ಮನವಿ : ಸಚಿವ ಕೋಟ – Vishwanews24
ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಬೈಕ್ ಸವಾರ ಶಂಕರ್ ಕೋಟ್ಯಾನರನ್ನು ಸಾರ್ವಜನಿಕರು ಸೇರಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಶಿರ್ವ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…