ಶಿರ್ವ : ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿಯನ್ನು ಹೆರಿಗೆ ಮಾಡಿಸಿ, ಬಳಿಕ ಮಗುವನ್ನು ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸರು ವೈದ್ಯ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಿ.ಸಿ.ರೋಡಿನ ವೈದ್ಯ ಡಾ.ಸೋಮೇಶ್ ಸೊಲೊಮನ್, ಮಂಗಳೂರಿನಲ್ಲಿ ಪೈಯಿಂಗ್ ಗೆಸ್ಟ್ ನಡೆಸುತ್ತಿರುವ ವಿಜಯಲಕ್ಷ್ಮೀ ಯಾನೆ ವಿಜಯ ಮತ್ತು ಅತ್ಯಾಚಾರ ಎಸಗಿದ ಆರೋಪಿ ನವನೀತ್ ನಾರಾಯಣ(25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ: ಹಲವು ವರ್ಷಗಳಿಂದ ಮಕ್ಕಳಾಗದ ಕಾರಣಕ್ಕೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ 92ನೇ ಹೇರೂರು ಗ್ರಾಮದ ಕಲ್ಲುಗುಡ್ಡೆ ನಿವಾಸಿ ಪ್ರಭಾವತಿ ಹಾಗೂ ರಮೇಶ್ ಮೂಲ್ಯ ದಂಪತಿ, ಮಗು ದತ್ತು ಪಡೆಯುವ ಬಗ್ಗೆ ಅವರ ಚಿಕ್ಕಮ್ಮನ ಮಗಳು ಪ್ರಿಯಾಂಕ ಅವರಲ್ಲಿ ತಿಳಿಸಿದ್ದರು.
ಪ್ರಿಯಾಂಕ ಈ ವಿಚಾರದಲ್ಲಿ ದಂಪತಿಗೆ ವಿಜಯಲಕ್ಷ್ಮೀ ಅವರನ್ನು ಪರಿಚಯ ಮಾಡಿಸಿದ್ದರು. ವಿಜಯಲಕ್ಷ್ಮೀಯ ಪೆಯಿಂಗ್ ಗೆಸ್ಟ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಅವಿವಾಹಿತ ಮಗಳು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ಆ ಮಗುವನ್ನೇ ನೀಡುವುದಾಗಿ ವಿಜಯಲಕ್ಷ್ಮೀ ದಂಪತಿಗೆ ತಿಳಿಸಿದ್ದರು. ಹೀಗೆ ಗರ್ಭದಲ್ಲಿರುವ ಈ ಮಗುವನ್ನು ಹೆರಿಗೆಯ ಬಳಿಕ ಈ ದಂಪತಿಗೆ ಮಾರಾಟ ಮಾಡಲು ವಿಜಯಲಕ್ಷ್ಮೀ ಹಾಗೂ ಡಾ.ಸೋಮೇಶ್ ಯೋಜನೆ ಹಾಕಿಕೊಂಡರೆನ್ನಲಾಗಿದೆ.
ಗರ್ಭಿಣಿ ಯುವತಿ ಸ್ಕ್ಯಾನಿಂಗ್ಗೆ ಹೋದಾಗಲೆಲ್ಲ ಇವರು ಆಕೆಯ ಆಧಾರ್ ಕಾರ್ಡ್ ಬದಲು ಶಿರ್ವದ ಪ್ರಭಾವತಿ ಅವರ ಆಧಾರ್ ಕಾರ್ಡ್ ನೀಡುತ್ತಿದ್ದರು. ಹೀಗೆ ಗರ್ಭದಲ್ಲಿರುವಾಗಲೇ ಈ ಮಗು ಪ್ರಭಾವತಿ ಅವರದ್ದಾಗಿ ಮಾಡುವ ಪ್ಲಾನ್ ಇವರದ್ದಾಗಿತ್ತು. ಯುವತಿ ಆ.3ರಂದು ಮಂಗಳೂರಿನ ಕೊಲಸೋ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆ ಮಗುವನ್ನು ವಿಜಯಲಕ್ಷ್ಮೀ ಹಾಗೂ ಡಾ.ಸೋಮೇಶ್, ಪ್ರಭಾವತಿ ದಂಪತಿಗೆ 4.5ಲಕ್ಷ ರೂ. ಹಣಕ್ಕೆ ಮಾರಾಟ ಮಾಡಿದರು ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…