Featured

ಶಿರ್ವ: ಮಡಿಕೆಯಲ್ಲಿರುವ ದೇವರ ತೀರ್ಥಕ್ಕಾಗಿ ಬರುತ್ತಿದೆ ನಾಗರ – ಬಬ್ಬುಸ್ವಾಮಿಯ ನಾಗಬನದಲ್ಲಿ ಅಚ್ಚರಿಯ ಘಟನೆ

ಶಿರ್ವ: ನಾಗನಿಗೆಂದೇ ಮಣ್ಣಿನ ಮಡಿಕೆಯಲ್ಲಿ ಇರಿಸಲಾಗುವ ಶುದ್ಧ ತೀರ್ಥ ನೀರನ್ನು ನಾಗರ ಹಾವು ದಿನಂಪ್ರತಿ ಕುಡಿದು ಹೋಗುವ ಅಚ್ಚರಿಯ ಘಟನೆ ಕಟಪಾಡಿಯ ಕೋಟೆ ಗ್ರಾಮದ ಕಿನ್ನಿಗುಡ್ಡೆ ಬಬ್ಬು ಸ್ವಾಮಿಯ ನಾಗಬನದ ಸನ್ನಿದಿಯಲ್ಲಿ ನಡೆಯುತ್ತಿದೆ.

ಅಚ್ಚರಿಯಾದರೂ ಸತ್ಯ. ಕಿನ್ನಿಗುಡ್ಡೆಯಲ್ಲಿರುವ ಬಬ್ಬು ಸ್ವಾಮಿಯ ನಾಗಬನದಲ್ಲಿ ಎರಡು ಜತೆ ಮಡಿಕೆಗಳಿದ್ದು, ಇದನ್ನು ಪುರಾತನ ಕಾಲದಲ್ಲಿ ಪ್ರತಿಷ್ಠಾಪಿಸಲಾದ ನಾಗದೇವರ ಮೂರ್ತಿಯ ಮುಂದೆ ಇರಿಸುವುದು ಹಿಂದಿನಿಂದಲೂ ಬಂದ ವಾಡಿಕೆ. ಈ ಮಡಿಕೆಯನ್ನು ಪ್ರತಿದಿನ ಶುದ್ದಿಗೊಳಿಸಿ ಹತ್ತಿರದಲ್ಲೇ ಇರುವ ವೆಂಕಟರಮಣ ದೇವಸ್ಥಾನದ ದೇವರ ತೀರ್ಥ ಮತ್ತು ತುಳಸಿದಳವನ್ನು ಹಾಕಿ ಇಡಲಾಗುತ್ತದೆ. ದಿನನಿತ್ಯದ ಪೂಜೆ ಮುಗಿದು ಹೆಚ್ಚಿನ ಜನರೆಲ್ಲಾ ಅಲ್ಲಿಂದ ತೆರಳುತ್ತಿದ್ದಂತೆ ಇಲ್ಲಿ ನಾಗರ ಹಾವು ಪ್ರತ್ಯಕ್ಷವಾಗುತ್ತದೆ.

ಭಾನುವಾರ ಅಲ್ಲೇ ಇರುವ ದೈವಸ್ಥಾನದ ಸುತ್ತ ಇಂಟರ್‌ಲಾಕ್ ಹಾಕುವ ಉದ್ದೇಶದಿಂದ ಮಣ್ಣು ಅಗೆಯುವ ವೇಳೆ ಪೂಜೆ ನಡೆಯುತ್ತಿದ್ದಂತೆ, ಇದೆಲ್ಲದಕ್ಕೂ ಪೂರಕ ಎಂಬಂತೆ ಅಲ್ಲಿ ನಾಗರ ಹಾವೊಂದು ಪ್ರತ್ಯಕ್ಷವಾಗಿ ಅಲ್ಲಿಂದ ಹಾದು ಹೋಗಿದೆ. ಇಲ್ಲಿ ದಿನಂಪ್ರತಿ ಪೂಜೆ ಸಲ್ಲಿಸುವವರ ಪ್ರಕಾರ ಪುರಾತನ ಕಾಲದಿಂದಲೂ ನಾಗರಹಾವು ಇಲ್ಲಿಗೆ ಬಂದು ನೀರು ಕುಡಿದು ಹೋಗುತ್ತದೆ ಎಂಬ ವಿಚಾರವನ್ನು ಹಿರಿಯರು ಹೇಳುತ್ತಿದ್ದರಂತೆ. ಆದರೆ ಇದೀಗ ನಾಗದೇವರ ಪ್ರತ್ಯಕ್ಷ ದರ್ಶನವಾಗುತ್ತಿರುವುದು ರೋಮಾಂಚಕಾರಿ ವಿಚಾರವಾಗಿದೆ ಅನ್ನುತ್ತಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

14 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

15 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

15 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

16 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

17 hours ago