ಶಿರ್ವ : ಮಹಿಳೆಯೊಬ್ಬರ ಸಂಶಯಾಸ್ಪದ ಸಾವಿನ ಕುರಿತು ಪ್ರಕರಣ ದಾಖಲಾಗಿದೆ. ಮೃತಪಟ್ಟ ಮಹಿಳೆ ಮಗಳು ದೂರು ದಾಖಲಿಸಿದ್ದು, ತಾಯಿ ಸುಮತಿ (66) ಅವರು ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ
ಮೃತರಿಗೆ 5 ಜನ ಮಕ್ಕಳಿದ್ದು ಅವರ ಗಂಡ 03 ವರ್ಷದ ಹಿಂದೆ ಮರಣ ಹೊಂದಿದ ಬಳಿಕ ಒಬ್ಬರೇ ವಾಸಿಸುತ್ತಿದ್ದರು. ಮಕ್ಕಳು ಆಗಾಗ್ಗೆ ಬಂದು ಹೋಗುತಿದ್ದರು.
ಆ 26 ರಂದು ಮಗಳು ವಿಜಯ್ ಅವರು ಸುಮತಿ ರವರನ್ನು ಮನೆಗೆ ಬಂದು ಮಾತನಾಡಿಸಿಕೊಂಡು ಹೋಗಿದ್ದು ಪ್ರತಿ ನಿತ್ಯದಂತೆ ಆಗಸ್ಟ್ 27 ರಂದು ರಾತ್ರಿ 10:30 ಗಂಟೆಗೆ ತಾಯಿಗೆ ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸದೇ ಇದ್ದಾಗ ತನ್ನ ಇಬ್ಬರು ಮಕ್ಕಳಾದ ರೋಶನ್ ಮತ್ತು ಮೋಹಿತ್ ರನ್ನು ತಾಯಿ ಮನೆಗೆ ಕಳುಹಿಸಿಕೊಟ್ಟಿದ್ದು ಅವರಿಬ್ಬರು ಅಲ್ಲಿಗೆ ಹೋಗಿ ನೋಡಿ ಸುಮತಿ ರವರು ಮಲಗಿದ್ದಾಗಿ, ಕರೆದರೂ ಏಳುತ್ತಿಲ್ಲ ಎಂದು ತಿಳಿಸಿದ್ದಾರೆ. ಕೂಡಲೇ ತನ್ನ ಗಂಡನೊಂದಿಗೆ ಅಲ್ಲಿಗೆ ಹೋಗಿ ನೋಡಲಾಗಿ ತಾಯಿ ಮಾಡನಾಡದೇ ಇದ್ದು 108 ನೇ ವಾಹನಕ್ಕೆ ಕರೆ ಮಾಡಿ ಆ ವಾಹನದಲ್ಲಿ ನೆರೆ-ಕರೆಯವರ ಸಹಾಯದೊಂದಿಗೆ ಕಾಪುವಿನ ಪ್ರಶಾಂತ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿನ ವೈದ್ಯರು ವಿಚಾರಿಸಿ ಕೆಎಮ್ ಸಿ ಆಸ್ಪತ್ರಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಅದರಂತೆ ಮಣಿಪಾಲದ ಕೆಎಮ್ ಸಿ ಆಸ್ಪತ್ರಗೆ ದಿನಾಂಕ 28/08/2024 ರಂದು 12:30 ಗಂಟೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ಅಲ್ಲಿನ ವೈದ್ಯಾದಿಕಾರಿಯವರು ಮೃತ ಪಟ್ಟಿದ್ದಾಗಿ ತಿಳಿಸಿದ್ದಾರೆ.
ತಾಯಿ ಯವರ ಮುಖವು ಊದಿಕೊಂಡಿದ್ದು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್, ಒಂದು ಜೊತೆ ಬಳೆ , ಉಂಗುರ ಸ್ವತುಗಳು ಇರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮನೆಯ ಬೇರೆ ಎಲ್ಲಾ ಸ್ವತ್ತುಗಳು ಯಥಾ ಸ್ಥಿತಿಯಲ್ಲಿರುತ್ತವೆ. ಸುಮತಿ ರವರ ಮರಣದಲ್ಲಿ ಸಂಶಯವಿರುವುದಾಗಿ ನೀಡಿದ ದೂರಿನಂತೆ ಶಿರ್ವಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…