ಶಿರ್ವ : ಮಹಿಳೆಯೊಬ್ಬರ ಸಂಶಯಾಸ್ಪದ ಸಾವಿನ ಕುರಿತು ಪ್ರಕರಣ ದಾಖಲಾಗಿದೆ. ಮೃತಪಟ್ಟ ಮಹಿಳೆ ಮಗಳು ದೂರು ದಾಖಲಿಸಿದ್ದು, ತಾಯಿ ಸುಮತಿ (66) ಅವರು ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ
ಮೃತರಿಗೆ 5 ಜನ ಮಕ್ಕಳಿದ್ದು ಅವರ ಗಂಡ 03 ವರ್ಷದ ಹಿಂದೆ ಮರಣ ಹೊಂದಿದ ಬಳಿಕ ಒಬ್ಬರೇ ವಾಸಿಸುತ್ತಿದ್ದರು. ಮಕ್ಕಳು ಆಗಾಗ್ಗೆ ಬಂದು ಹೋಗುತಿದ್ದರು.
ಆ 26 ರಂದು ಮಗಳು ವಿಜಯ್ ಅವರು ಸುಮತಿ ರವರನ್ನು ಮನೆಗೆ ಬಂದು ಮಾತನಾಡಿಸಿಕೊಂಡು ಹೋಗಿದ್ದು ಪ್ರತಿ ನಿತ್ಯದಂತೆ ಆಗಸ್ಟ್ 27 ರಂದು ರಾತ್ರಿ 10:30 ಗಂಟೆಗೆ ತಾಯಿಗೆ ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸದೇ ಇದ್ದಾಗ ತನ್ನ ಇಬ್ಬರು ಮಕ್ಕಳಾದ ರೋಶನ್ ಮತ್ತು ಮೋಹಿತ್ ರನ್ನು ತಾಯಿ ಮನೆಗೆ ಕಳುಹಿಸಿಕೊಟ್ಟಿದ್ದು ಅವರಿಬ್ಬರು ಅಲ್ಲಿಗೆ ಹೋಗಿ ನೋಡಿ ಸುಮತಿ ರವರು ಮಲಗಿದ್ದಾಗಿ, ಕರೆದರೂ ಏಳುತ್ತಿಲ್ಲ ಎಂದು ತಿಳಿಸಿದ್ದಾರೆ. ಕೂಡಲೇ ತನ್ನ ಗಂಡನೊಂದಿಗೆ ಅಲ್ಲಿಗೆ ಹೋಗಿ ನೋಡಲಾಗಿ ತಾಯಿ ಮಾಡನಾಡದೇ ಇದ್ದು 108 ನೇ ವಾಹನಕ್ಕೆ ಕರೆ ಮಾಡಿ ಆ ವಾಹನದಲ್ಲಿ ನೆರೆ-ಕರೆಯವರ ಸಹಾಯದೊಂದಿಗೆ ಕಾಪುವಿನ ಪ್ರಶಾಂತ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿನ ವೈದ್ಯರು ವಿಚಾರಿಸಿ ಕೆಎಮ್ ಸಿ ಆಸ್ಪತ್ರಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಅದರಂತೆ ಮಣಿಪಾಲದ ಕೆಎಮ್ ಸಿ ಆಸ್ಪತ್ರಗೆ ದಿನಾಂಕ 28/08/2024 ರಂದು 12:30 ಗಂಟೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ಅಲ್ಲಿನ ವೈದ್ಯಾದಿಕಾರಿಯವರು ಮೃತ ಪಟ್ಟಿದ್ದಾಗಿ ತಿಳಿಸಿದ್ದಾರೆ.
ತಾಯಿ ಯವರ ಮುಖವು ಊದಿಕೊಂಡಿದ್ದು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್, ಒಂದು ಜೊತೆ ಬಳೆ , ಉಂಗುರ ಸ್ವತುಗಳು ಇರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮನೆಯ ಬೇರೆ ಎಲ್ಲಾ ಸ್ವತ್ತುಗಳು ಯಥಾ ಸ್ಥಿತಿಯಲ್ಲಿರುತ್ತವೆ. ಸುಮತಿ ರವರ ಮರಣದಲ್ಲಿ ಸಂಶಯವಿರುವುದಾಗಿ ನೀಡಿದ ದೂರಿನಂತೆ ಶಿರ್ವಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…