ಶಿರ್ವ: ಬೆಳಪು ಬದ್ರಿಯಾ ಮಸೀದಿ ಬಳಿ, ಬಾಡಿಗೆ ಮನೆ ನಿವಾಸಿ ಕರಿಶ್ಮಾ ಬಾನು (27) ಮಾ.21ರಂದು ಸಂಜೆ ಕಾಣೆಯಾಗಿದ್ದಾರೆ.
ತನ್ನ ಇಬ್ಬರು ಮಕ್ಕಳ ಜತೆ ಅಲ್ಲಿಯೇ ಹತ್ತಿರ ಇರುವ ಅತ್ತೆ ಮನೆಗೆ ಹೋಗಿದ್ದು,ಅಲ್ಲಿಂದ ಸಂಜೆ 6.30 ರ ವೆಳೆಗೆ ಮಕ್ಕಳನ್ನು ಅತ್ತೆ ಮನೆಯಲ್ಲಿಯೇ ಬಿಟ್ಟು ಒಬ್ಬಳೇ ಮನೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ.
ಮನೆಯಲ್ಲಿದ್ದ ಆಕೆಯ ಬಟ್ಟೆಬರೆ, ಚಿನ್ನಾಭರಣ, ನಗದು, ಆಕೆಯ ದಾಖಲಾತಿ ನಾಪತ್ತೆಯಾಗಿದ್ದು, ಬ್ಯಾಗ್ ಸಹ ಇಲ್ಲವಾಗಿದೆ.
ಪತಿ ಮಹಮ್ಮದ್ ಆರೀಫ್ ಮೀನಿನ ಲಾರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಮಾ.20 ರಂದು ಕೆಲಸದ ನಿಮಿತ್ತ ಲಾರಿಯಲ್ಲಿ ಕೇರಳ ರಾಜ್ಯಕ್ಕೆ ಹೋಗಿದ್ದ ವೇಳೆ ಮಾ.21 ರಂದು ಸಂಜೆ ಆಕೆಯ ಅಣ್ಣ ಆಸೀರ್ ಕರೆ ಮಾಡಿ ಕಾಣೆಯಾದ ಬಗ್ಗೆ ವಿಚಾರ ತಿಳಿಸಿದ್ದಾರೆ.
ಕೂಡಲೇ ಕೇರಳದಿಂದ ಹೊರಟು ಮಾ.22 ರಂದು ಬೆಳಪುವಿನಲ್ಲಿರುವ ಮನೆಗೆ ಬಂದು ನೋಡಿ ವಿಚಾರಿಸಿದ ಬಳಿಕ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…