ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ ಮಟ್ಟಾರು ಪೋಸ್ಟ್ನ ಕಾಫಿಕಾಡು ಪ್ರದೇಶದಲ್ಲಿ ನಡೆದಿದೆ.
ಪ್ರಕಾಶ್ ಆಚಾರ್ಯ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮದುವೆಯಾಗದಿರುವ ಪ್ರಕಾಶ್ ಅವರು ಕಳೆದ ಸುಮಾರು 20 ವರ್ಷಗಳಿಂದ ಮದ್ಯಪಾನ ಮಾಡುವ ಚಟ ಹೊಂದಿದ್ದು, ಮಾನಸಿಕ ಖಿನ್ನತೆಯಿಂದಲೂ ಬಳಲುತ್ತಿದ್ದರು. ಈ ಹಿನ್ನೆಲೆ ಅವರಿಗೆ ಬಾಳಿಗ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ದಿನಾಂಕ 12 ಏಪ್ರಿಲ್ 2026 ರಂದು ಮನೆಯಲ್ಲಿ ಗಲಾಟೆ ಮಾಡಿದ್ದ ಅವರು, ತಾಯಿಯ ಬಳಿ ತಾನು ಸಾಯುವುದಾಗಿ ಪದೇಪದೇ ಹೇಳಿಕೊಂಡಿದ್ದರು. ಇದಾದ ನಂತರ, ಏಪ್ರಿಲ್ 13ರಂದು ಬೆಳಗಿನ ಜಾವ 3.15 ರಿಂದ 6.30 ಗಂಟೆಯೊಳಗೆ, ಮನೆಯ ಸಮೀಪದ ಕುಂಟಲ ಮರದ ಕೊಂಬೆಗೆ ಲುಂಗಿ ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…