ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ ಮಟ್ಟಾರು ಪೋಸ್ಟ್ನ ಕಾಫಿಕಾಡು ಪ್ರದೇಶದಲ್ಲಿ ನಡೆದಿದೆ.
ಪ್ರಕಾಶ್ ಆಚಾರ್ಯ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮದುವೆಯಾಗದಿರುವ ಪ್ರಕಾಶ್ ಅವರು ಕಳೆದ ಸುಮಾರು 20 ವರ್ಷಗಳಿಂದ ಮದ್ಯಪಾನ ಮಾಡುವ ಚಟ ಹೊಂದಿದ್ದು, ಮಾನಸಿಕ ಖಿನ್ನತೆಯಿಂದಲೂ ಬಳಲುತ್ತಿದ್ದರು. ಈ ಹಿನ್ನೆಲೆ ಅವರಿಗೆ ಬಾಳಿಗ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ದಿನಾಂಕ 12 ಏಪ್ರಿಲ್ 2026 ರಂದು ಮನೆಯಲ್ಲಿ ಗಲಾಟೆ ಮಾಡಿದ್ದ ಅವರು, ತಾಯಿಯ ಬಳಿ ತಾನು ಸಾಯುವುದಾಗಿ ಪದೇಪದೇ ಹೇಳಿಕೊಂಡಿದ್ದರು. ಇದಾದ ನಂತರ, ಏಪ್ರಿಲ್ 13ರಂದು ಬೆಳಗಿನ ಜಾವ 3.15 ರಿಂದ 6.30 ಗಂಟೆಯೊಳಗೆ, ಮನೆಯ ಸಮೀಪದ ಕುಂಟಲ ಮರದ ಕೊಂಬೆಗೆ ಲುಂಗಿ ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…