Featured

ಶಿರ್ವ :  ಮೊದಲ ಮಳೆಯ ಆವಾಂತರ – ರಸ್ತೆ ಕೆಸರುಮಯ ; ಸಂಚಾರ ದುಸ್ತರ – Vishwanews24

ಶಿರ್ವ :  ಮೊದಲ ಮಳೆಯ ಆವಾಂತರ – ರಸ್ತೆ ಕೆಸರುಮಯ ; ಸಂಚಾರ ದುಸ್ತರ

ಶಿರ್ವ: ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು ಬಸ್‌ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ರಸ್ತೆ ಎತ್ತರಿಸಿ ಮೋರಿ ಕಾಮಗಾರಿ ನಡೆಯುತ್ತಿದ್ದು ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ರಸ್ತೆ ಕೆಸರುಮಯವಾಗಿ ಜಾರುತ್ತಿದ್ದು, ವಾಹನ ಸವಾರರಿಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ.

ಕೋಡು-ಪಂಜಿಮಾರು ತಿರುವಿನ ಇಳಿಜಾರಿನ ರಸ್ತೆಯಲ್ಲಿ ಮೋರಿ ನಿರ್ಮಿಸಿ ರಸ್ತೆ ಎತ್ತರಿಸಲು ಮೋರಿಯ ಇಕ್ಕೆಲದಲ್ಲಿ ಮಣ್ಣು ತುಂಬಿಸಲಾಗಿತ್ತು. ರಾತ್ರಿ ಸುರಿದ ಭಾರೀ ಮಳೆಗೆ ರಸ್ತೆ ಕೆಸರುಮಯವಾಗಿ ಆವಾಂತರ ಸೃಷ್ಠಿಯಾಗಿದೆ. ಬೆಳ್ಳಂಬೆಳಗ್ಗೆ ರಸ್ತೆಯ ಕೆಸರಿನಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡಿದ್ದಾರೆ. ರಸ್ತೆ ಕೆಸರುಮಯವಾಗಿ ಜಾರುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಚಲಿಸುವಂತಾಗಿದೆ. ರಸ್ತೆಯ ಒಂದು ಮಗ್ಗುಲಿನ ಮಣ್ಣು ಕುಸಿದಿದ್ದು, ಬಬ್ಬರ್ಯ ದೈವಸ್ಥಾನದ ಕಡೆಗೆ ಹೋಗುವ ನಾಗರಿಕರಿಗೆ ದಾರಿಯೇ ಇಲ್ಲದಂತಾಗಿದೆ.

ರಸ್ತೆ ವಿಸ್ತರಣೆ ಕಾಮಗಾರಿ ನಡೆದು ತಿರುವು ರಸ್ತೆ ನೇರವಾಗಿ ಸುವ್ಯವಸ್ಥಿತ ರಸ್ತೆಯಾಗುವ ಮೊದಲೇ ಮಳೆ ಅವಾಂತರ ಸೃಷ್ಠಿ ಮಾಡಿದೆ. ಸಂಬಂಧಪಟ್ಟ ಇಲಾಖೆ ಮತ್ತು ಗುತ್ತಿಗೆದಾರರು ವಾಹನ ನಿಬಿಡತೆಯಿಂದ ಕೂಡಿರುವ ಈ ರಸ್ತೆಯನ್ನು ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡಬೇಕೆಂಬುದು ನಾಗರಿಕರ ಒತ್ತಾಯಿಸುತ್ತಿದ್ದಾರೆ.

Vishwa News 24

Recent Posts

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

1 minute ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

15 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago