Featured

ಶಿರ್ವ :  ಮೊದಲ ಮಳೆಯ ಆವಾಂತರ – ರಸ್ತೆ ಕೆಸರುಮಯ ; ಸಂಚಾರ ದುಸ್ತರ – Vishwanews24

ಶಿರ್ವ :  ಮೊದಲ ಮಳೆಯ ಆವಾಂತರ – ರಸ್ತೆ ಕೆಸರುಮಯ ; ಸಂಚಾರ ದುಸ್ತರ

ಶಿರ್ವ: ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು ಬಸ್‌ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ರಸ್ತೆ ಎತ್ತರಿಸಿ ಮೋರಿ ಕಾಮಗಾರಿ ನಡೆಯುತ್ತಿದ್ದು ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ರಸ್ತೆ ಕೆಸರುಮಯವಾಗಿ ಜಾರುತ್ತಿದ್ದು, ವಾಹನ ಸವಾರರಿಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ.

ಕೋಡು-ಪಂಜಿಮಾರು ತಿರುವಿನ ಇಳಿಜಾರಿನ ರಸ್ತೆಯಲ್ಲಿ ಮೋರಿ ನಿರ್ಮಿಸಿ ರಸ್ತೆ ಎತ್ತರಿಸಲು ಮೋರಿಯ ಇಕ್ಕೆಲದಲ್ಲಿ ಮಣ್ಣು ತುಂಬಿಸಲಾಗಿತ್ತು. ರಾತ್ರಿ ಸುರಿದ ಭಾರೀ ಮಳೆಗೆ ರಸ್ತೆ ಕೆಸರುಮಯವಾಗಿ ಆವಾಂತರ ಸೃಷ್ಠಿಯಾಗಿದೆ. ಬೆಳ್ಳಂಬೆಳಗ್ಗೆ ರಸ್ತೆಯ ಕೆಸರಿನಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡಿದ್ದಾರೆ. ರಸ್ತೆ ಕೆಸರುಮಯವಾಗಿ ಜಾರುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಚಲಿಸುವಂತಾಗಿದೆ. ರಸ್ತೆಯ ಒಂದು ಮಗ್ಗುಲಿನ ಮಣ್ಣು ಕುಸಿದಿದ್ದು, ಬಬ್ಬರ್ಯ ದೈವಸ್ಥಾನದ ಕಡೆಗೆ ಹೋಗುವ ನಾಗರಿಕರಿಗೆ ದಾರಿಯೇ ಇಲ್ಲದಂತಾಗಿದೆ.

ರಸ್ತೆ ವಿಸ್ತರಣೆ ಕಾಮಗಾರಿ ನಡೆದು ತಿರುವು ರಸ್ತೆ ನೇರವಾಗಿ ಸುವ್ಯವಸ್ಥಿತ ರಸ್ತೆಯಾಗುವ ಮೊದಲೇ ಮಳೆ ಅವಾಂತರ ಸೃಷ್ಠಿ ಮಾಡಿದೆ. ಸಂಬಂಧಪಟ್ಟ ಇಲಾಖೆ ಮತ್ತು ಗುತ್ತಿಗೆದಾರರು ವಾಹನ ನಿಬಿಡತೆಯಿಂದ ಕೂಡಿರುವ ಈ ರಸ್ತೆಯನ್ನು ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡಬೇಕೆಂಬುದು ನಾಗರಿಕರ ಒತ್ತಾಯಿಸುತ್ತಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

1 day ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

1 day ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

2 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

2 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

2 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

2 days ago