Featured

ಶಿರ್ವ : ರಸ್ತೆಗೆ ಉರುಳಿಬಿದ್ದ ಮರ – ದ್ವಿಚಕ್ರ ವಾಹನ ಸವಾರನಿಗೆ ಗಾಯ – Vishwanews24

ಶಿರ್ವ : ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮಾವಿನ  ಮರ ..

ದ್ವಿಚಕ್ರ ವಾಹನ ಸವಾರನಿಗೆ ಗಾಯ , ರಸ್ತೆ ಸಂಚಾರಕ್ಕೆ ಅಡಚಣೆ..

ಘಟನಾ ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ..

ಕಟಪಾಡಿ : ಕಟಪಾಡಿ ಶಿರ್ವ ರಸ್ತೆಯ ಕಟಪಾಡಿ ವಾರದ ಸಂತೆ ಮಾರುಕಟ್ಟೆ ಬಳಿ ಖಾಸಗಿಯವರಿಗೆ ಸೇರಿದ ಮಾವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದು ರಸ್ತೆಸಂಚಾರಕ್ಕೆ ಅಡಚಣೆಯುಂಟಾದ ಘಟನೆ ಶನಿವಾರ ರಾತ್ರಿ  ನಡೆದಿದೆ.

ಘಟನೆಯಲ್ಲಿ ಒಬ್ಬ ದ್ವಿಚಕ್ರ ವಾಹನ ಸವಾರ ಚಿಟ್ಪಾಡಿ ಡಯನಾ ಟಾಕೀಸ್ ಬಳಿಯ ಸೆಲ್ವ ಕುಮಾರ್(೩೯)ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಎರಡು ದ್ವಿಚಕ್ರವಾಹನಗಳಿಗೆ ಹಾನಿಯಾಗಿದೆ.

ಶನಿವಾರ ವಾರದ ಸಂತೆ ನಡೆಯುತ್ತಿದ್ದು, ಮಳೆ ಬರುತ್ತಿದ್ದ ಕಾರಣ ರಸ್ತೆಯಲ್ಲಿ ಹೆಚ್ಚಿನ ಜನಸಂಚಾರ ಇಲ್ಲದ   ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.

ರಸ್ತೆಗೆ ಅಡ್ಡಲಾಗಿ ಮರ ಉರುಳಿರುವುದರಿಂದ ಬೆಳ್ಮಣ್ ಶಿರ್ವ ಕಟಪಾಡಿ ಭಾಗದ ವಾಹನ ಸವಾರರಿಗೆ ತೊಂದರೆಯಾಗಿದ್ದ,  ರೂಟ್ ಬಸ್ಸುಗಳು ಮೂಡಬೆಟ್ಟು ಶಂಕರಪುರ ರಸ್ತೆಯ ಮೂಲಕ ಸಂಚರಿಸುವಂತಾಯಿತು.

ಸ್ಥಳೀಯ ಪೋಲಿಸರು ಅರಣ್ಯ ಸಿಬಂದಿ ಹಾಗೂ ಸಾರ್ವಜನಿಕರು ರಸ್ತೆಯಿಂದ ಮರ ತೆರವುಗೊಳಿಸಲು ಸಹಕರಿಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕಟಪಾಡಿ ಹೊರಠಾಣಾ ಸಿಬಂದಿ ರುಕ್ಮಯ್ಯ ಹಾಗೂ ಮೋಹನ್ ತೆರವು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago