ಕಟಪಾಡಿ : ಕಟಪಾಡಿ ಶಿರ್ವ ರಸ್ತೆಯ ಕಟಪಾಡಿ ವಾರದ ಸಂತೆ ಮಾರುಕಟ್ಟೆ ಬಳಿ ಖಾಸಗಿಯವರಿಗೆ ಸೇರಿದ ಮಾವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದು ರಸ್ತೆಸಂಚಾರಕ್ಕೆ ಅಡಚಣೆಯುಂಟಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಒಬ್ಬ ದ್ವಿಚಕ್ರ ವಾಹನ ಸವಾರ ಚಿಟ್ಪಾಡಿ ಡಯನಾ ಟಾಕೀಸ್ ಬಳಿಯ ಸೆಲ್ವ ಕುಮಾರ್(೩೯)ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದ್ವಿಚಕ್ರವಾಹನಗಳಿಗೆ ಹಾನಿಯಾಗಿದೆ.
ಶನಿವಾರ ವಾರದ ಸಂತೆ ನಡೆಯುತ್ತಿದ್ದು, ಮಳೆ ಬರುತ್ತಿದ್ದ ಕಾರಣ ರಸ್ತೆಯಲ್ಲಿ ಹೆಚ್ಚಿನ ಜನಸಂಚಾರ ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.
ರಸ್ತೆಗೆ ಅಡ್ಡಲಾಗಿ ಮರ ಉರುಳಿರುವುದರಿಂದ ಬೆಳ್ಮಣ್ ಶಿರ್ವ ಕಟಪಾಡಿ ಭಾಗದ ವಾಹನ ಸವಾರರಿಗೆ ತೊಂದರೆಯಾಗಿದ್ದ, ರೂಟ್ ಬಸ್ಸುಗಳು ಮೂಡಬೆಟ್ಟು ಶಂಕರಪುರ ರಸ್ತೆಯ ಮೂಲಕ ಸಂಚರಿಸುವಂತಾಯಿತು.
ಸ್ಥಳೀಯ ಪೋಲಿಸರು ಅರಣ್ಯ ಸಿಬಂದಿ ಹಾಗೂ ಸಾರ್ವಜನಿಕರು ರಸ್ತೆಯಿಂದ ಮರ ತೆರವುಗೊಳಿಸಲು ಸಹಕರಿಸಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕಟಪಾಡಿ ಹೊರಠಾಣಾ ಸಿಬಂದಿ ರುಕ್ಮಯ್ಯ ಹಾಗೂ ಮೋಹನ್ ತೆರವು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…