ಕಟಪಾಡಿ : ಕಟಪಾಡಿ ಶಿರ್ವ ರಸ್ತೆಯ ಕಟಪಾಡಿ ವಾರದ ಸಂತೆ ಮಾರುಕಟ್ಟೆ ಬಳಿ ಖಾಸಗಿಯವರಿಗೆ ಸೇರಿದ ಮಾವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದು ರಸ್ತೆಸಂಚಾರಕ್ಕೆ ಅಡಚಣೆಯುಂಟಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಒಬ್ಬ ದ್ವಿಚಕ್ರ ವಾಹನ ಸವಾರ ಚಿಟ್ಪಾಡಿ ಡಯನಾ ಟಾಕೀಸ್ ಬಳಿಯ ಸೆಲ್ವ ಕುಮಾರ್(೩೯)ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದ್ವಿಚಕ್ರವಾಹನಗಳಿಗೆ ಹಾನಿಯಾಗಿದೆ.
ಶನಿವಾರ ವಾರದ ಸಂತೆ ನಡೆಯುತ್ತಿದ್ದು, ಮಳೆ ಬರುತ್ತಿದ್ದ ಕಾರಣ ರಸ್ತೆಯಲ್ಲಿ ಹೆಚ್ಚಿನ ಜನಸಂಚಾರ ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.
ರಸ್ತೆಗೆ ಅಡ್ಡಲಾಗಿ ಮರ ಉರುಳಿರುವುದರಿಂದ ಬೆಳ್ಮಣ್ ಶಿರ್ವ ಕಟಪಾಡಿ ಭಾಗದ ವಾಹನ ಸವಾರರಿಗೆ ತೊಂದರೆಯಾಗಿದ್ದ, ರೂಟ್ ಬಸ್ಸುಗಳು ಮೂಡಬೆಟ್ಟು ಶಂಕರಪುರ ರಸ್ತೆಯ ಮೂಲಕ ಸಂಚರಿಸುವಂತಾಯಿತು.
ಸ್ಥಳೀಯ ಪೋಲಿಸರು ಅರಣ್ಯ ಸಿಬಂದಿ ಹಾಗೂ ಸಾರ್ವಜನಿಕರು ರಸ್ತೆಯಿಂದ ಮರ ತೆರವುಗೊಳಿಸಲು ಸಹಕರಿಸಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕಟಪಾಡಿ ಹೊರಠಾಣಾ ಸಿಬಂದಿ ರುಕ್ಮಯ್ಯ ಹಾಗೂ ಮೋಹನ್ ತೆರವು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…