ಶಿರ್ವ : ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್ ಢಿಕ್ಕಿ ಹೊಡೆದು ತಂದೆ ಮೃತಪಟ್ಟು ಮಗ ಗಂಭೀರ ಗಾಯಗೊಂಡ ಘಟನೆ ಶಿರ್ವದ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್ ಬಳಿ ನಿನ್ನೆ ರಾತ್ರಿ ನಡೆದಿದೆ.
ಬಾಗಲಕೋಟೆ ಮೂಲದ ಶರಣಪ್ಪ ಬಾಲಪ್ಪ ಗಂಜಿಹಾಳ(40) ಮೃತಪಟ್ಟವರು. ಶ್ರವಣ ಕುಮಾರ(6) ಅಪಘಾತದಲ್ಲಿ ಗಾಯಗೊಂಡವರು.
ಶರಣಪ್ಪ ತನ್ನ ಪುತ್ರ ಶ್ರವಣಕುಮಾರನೊಂದಿಗೆ ಬುಧವಾರ ರಾತ್ರಿ 7 ಗಂಟೆ ಸುಮಾರಿಗೆ ದಿನಸಿ ತರಲು ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿದ್ದರು. ಈ ವೇಳೆ ಶಂಕರಪುರ ಕಡೆಯಿಂದ ವೇಗವಾಗಿ ಬಂದ ಬೈಕ್ ಸವಾರ ಇವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಸಾರ್ವಜನಿಕರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತಲೆಗೆ ಗಂಭೀರ ಗಾಯಗೊಂಡ ಶರಣಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಶ್ರವಣ ಕುಮಾರ ಅವರು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದೆ.
ಡಿಕ್ಕಿ ಹೊಡೆದ ಬೈಕ್ ಸವಾರ ಬೈಕ್ ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕುಂದಾಪುರ: ಬೈಕ್ಗಳ ನಡುವೆ ಅಪಘಾತ – ಪತಿ ಸಾವು , ಪತ್ನಿ ಗಂಭೀರ – Vishwanews24
ವೀಕೆಂಡ್ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…
ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…
ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…