Featured

ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣ – ಇಷ್ಟೊಂದು ದೊಡ್ಡ ಘಟನೆ ನಡೆದಿದ್ದರೂ ಕುಂದಾಪುರ ಶಾಂತವಾಗಿದೆ ; ಈ ಮೌನ ಒಳ್ಳೇಯದಲ್ಲ : ಶರಣ್ ಪಂಪ್‍ವೆಲ್  – Vishwanews24

ಇಂತಹ ಗಂಭೀರ ಪ್ರಕರಣದ ವಿರುದ್ದ ಕುಂದಾಪುರದ ಹಿಂದೂ ಸಮಾಜ ಸೆಟೆದು ನಿಂತು ರಸ್ತೆಗಿಳಿದು ಪ್ರತಿಭಟಿಸಬೇಕಿತ್ತು ..

ಇಷ್ಟೊಂದು ದೊಡ್ಡ ಘಟನೆ ನಡೆದಿದ್ದರೂ ಕುಂದಾಪುರ ಶಾಂತವಾಗಿದೆ..

ಈ ರೀತಿಯ ದೌರ್ಜನ್ಯ ನಡೆಯಬಾರದು ಎಂದಾದರೆ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲೇಬೇಕು..

ಶಿಲ್ಪಾ ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯಲ್ಲಿ ಶರಣ್ ಪಂಪ್‍ವೆಲ್

ಕುಂದಾಪುರ: ಭಯೋತ್ಪಾದಕ ಜಿಹಾದಿ ಅಜೀಜ್‍ನ ಮೋಸದ ಷಡ್ಯಂತರಕ್ಕೆ ಹಿಂದೂ ಯುವತಿ ಶಿಲ್ಪಾ ಬಲಿಯಾಗಿರುವುದು ಖೇದಕರ. ಇಷ್ಟೊಂದು ದೊಡ್ಡ ಘಟನೆ ನಡೆದಿದ್ದರೂ ಕುಂದಾಪುರ ಶಾಂತವಾಗಿದೆ. ಓರ್ವ ಹಿಂದೂ ಹೆಣ್ಣು ಮಗಳು ಮುಸ್ಲಿಂ ಯುವಕನ ದೌರ್ಜನ್ಯಕ್ಕೆ ಕುಗ್ಗಿ ಸಾವನ್ನಪ್ಪಿದ್ದಾಳೆ ಎಂದಾದರೂ ಯಾರೂ ಮಾತನಾಡುವ ಸ್ಥಿತಿಯಲ್ಲಿಲ್ಲ. ಖಂಡಿತವಾಗಿಯೂ ಈ ಮೌನ ಕುಂದಾಪುರಕ್ಕೆ ಒಳ್ಳೇಯದಲ್ಲ. ಇಂತಹ ಗಂಭೀರ ಪ್ರಕರಣದ ವಿರುದ್ದ ಕುಂದಾಪುರದ ಹಿಂದೂ ಸಮಾಜ ಸೆಟೆದು ನಿಂತು ರಸ್ತೆಗಿಳಿದು ಪ್ರತಿಭಟಿಸಬೇಕಿತ್ತು ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಹೇಳಿದರು.

ಶಾಸ್ತ್ರಿ ಸರ್ಕಲ್ ಬಳಿಯಲ್ಲಿ ಮಂಗಳವಾರ ಸಂಜೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕುಂದಾಪುರ ಪ್ರಖಂಡ ವತಿಯಿಂದ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಉಪ್ಪಿನಕುದ್ರು ಯುವತಿ ಶಿಲ್ಪಾ ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಆರು ವರ್ಷಗಳಿಂದ ಆರೋಪಿ ಪ್ರೀತಿ ಪ್ರೇಮದ ನಾಟಕವಾಡಿ ಅಶ್ಲೀಲ Photoಗಳನ್ನು ತೆಗೆದು ಶಿಲ್ಪಾಳನ್ನು ಬ್ಲಾಕ್‍ಮೇಲ್ ಮಾಡಿ ಅವಳನ್ನು ಮಾನಸಿಕವಾಗಿ ಕುಗ್ಗುವಂತೆ ಮಾಡಿದ್ದಾನೆ. ಇದು ಆತ್ಮಹತ್ಯೆ ಅಲ್ಲ. ಇದೊಂದು ವ್ಯವಸ್ಥಿತವಾದ ಕೊಲೆ. ಇಂದು ಶಿಲ್ಪಾ ದೇವಾಡಿಗ ಎಂದು ಸುಮ್ಮನಾದರೇ ನಾಳೆ ಲವ್ ಜಿಹಾದ್ ನಮ್ಮ ಮನೆಯ ಅಂಗಳಕ್ಕೆ ಬರುತ್ತದೆ. ಈ ರೀತಿಯ ದೌರ್ಜನ್ಯ ನಡೆಯಬಾರದು ಎಂದಾದರೆ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲೇಬೇಕು. ಕಳೆದ 20 ವರ್ಷಗಳಿಂದ ಹಿಂದೂ ಸಂಘಟನೆಗಳು ಲವ್ ಜಿಹಾದ್ ವಿರುದ್ದ ಸಾಕಷ್ಟು ಪ್ರತಿಭಟನೆಗಳನ್ನು ಮಾಡುತ್ತಿದ್ದರೂ,ಇಂದಿಗೂ ಲವ್ ಜಿಹಾದ್ ನಿಂತ ಲಕ್ಷಣ ಕಾಣುತ್ತಿಲ್ಲ ಎಂದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago