ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ ಅತಿರೇಕ ಎನಿಸಿ ಕಲಾವಿದರಿಗೆ ಕೋಪ ತರಿಸಿದ ಪ್ರಸಂಗಗಳೂ ಇವೆ. ಅಂಥದ್ದೇ ಪ್ರಸಂಗವೊಂದು ಕುಂದಾಪುರದಲ್ಲಿ ನಡೆದಿದೆ. ಇತ್ತೀಚೆಗೆ ಧರ್ಮಸ್ಥಳ ಮೇಳದ ಕಲಾವಿದ ಉಜಿರೆ ಅಶೋಕ್ ಭಟ್ ಅವರು ಬಿಗಿಲು (ಶಿಳ್ಳೆ) ಹಾಕಿದ ಪ್ರೇಕ್ಷಕನನ್ನು ರಂಗಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.
ಮಾ. 25ರಂದು ಮೇಳದ ಯಕ್ಷ ಗಾನ ಕುಂದಾಪುರದ ಹೆನ್ನಬೈಲು ಬಕ್ರ ಮನೆ ಎಂಬಲ್ಲಿ ನಡೆದಿತ್ತು. ಶ್ರೀಕೃಷ್ಣ ಪಾರಿಜಾತ, ನರಕಾಸುರ ಮೋಕ್ಷ ಪ್ರಸಂಗದಲ್ಲಿ ಭಾಗವತರು ಪದ್ಯ ಹೇಳಿದ ಬಳಿಕ ಪ್ರೇಕ್ಷಕ ವಲಯದಿಂದ ಶಿಳ್ಳೆ ಕೇಳಿ ಬಂದಿತು. ಈ ವೇಳೆ ಕೋಪಗೊಂಡ ಶ್ರೀಕೃಷ್ಣ ಪಾತ್ರಧಾರಿ ಉಜಿರೆ ಅಶೋಕ್ ಭಟ್ ಶಿಳ್ಳೆ ಹಾಕಿದ ಪ್ರೇಕ್ಷಕನನ್ನು ತರಾಟೆಗೆ ತೆಗೆದುಕೊಂಡರು ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕಲಾವಿದ ಉಜಿರೆ ಅಶೋಕ್ ಭಟ್ “ಪ್ರೈಮರಿ, ಹೈಸ್ಕೂಲ್ ವಿದ್ಯಾರ್ಥಿಗಳಂತೆ ಕಾಣಿಸುವ ಸುಮಾರು ಹತ್ತು ಮಂದಿ ಹುಡುಗರ ತಂಡ ಯಕ್ಷಗಾನ ಶುರು ಆದಾಗಿನಿಂದಲೇ ಅಂಗಡಿಯಲ್ಲಿ ಸಿಗುವ ಬಿಗಿಲು ಊದುತ್ತಿತ್ತು. ಆ ಶಬ್ದ ಕಿರಿಕಿರಿ ಉಂಟು ಮಾಡುತ್ತಿತ್ತು. ಕಲಾವಿದರು ಸಹಿಸಿಕೊಂಡಿದ್ದರು. ಅತಿ ಎನಿಸಿದಾಗ, ನಾನು ಪ್ರೇಕ್ಷಕ ಹೇಗೆ ಇರಬೇಕೆಂದು ಬುದ್ದಿ ಹೇಳಿದ್ದೇನೆ. ನಾನು ಮಾತ್ರ ಅಲ್ಲ. ಅಲ್ಲಿದ್ದ ಇತರ ಪ್ರೇಕ್ಷಕರೂ ಅವರಿಗೆ ಬೈದಿದ್ದರು. ಪ್ರೇಕ್ಷಕನಿಗೆ ಕಲಾವಿದನ ಅಭಿನಯ ಖುಷಿ ಆದಲ್ಲಿ ಆತ ನಿರ್ಗಮಿಸುವ ವೇಳೆ ಚಪ್ಪಾಳೆ ತಟ್ಟಬೇಕು. ವೇದಿಕೆಯಲ್ಲಿ ಇರುವಾಗ, ವೇದಿಕೆ ಏರುವಾಗ ಅದು ಸಮಂಜಸ ಅಲ್ಲ. ಹಿಂದೆ ಶೇಣಿ ಗೋಪಾಲಕೃಷ್ಣ ಭಟ್ ಹಾಗೂ ಇತರ ಹಿರಿಯ ಕಲಾವಿದರು ಇಂತಹ ವರ್ತನೆ ವಿರುದ್ಧ ರಂಗಸ್ಥಳದಲ್ಲೇ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದರು” ಎಂದು ಸಮರ್ಥಿಸಿಕೊಂಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…