Featured

ಶಿವಕುಮಾರ ಸ್ವಾಮೀಜಿ ಜಯಂತಿ ; 112 ಶಿಶುಗಳಿಗೆ ‘ಶಿವಕುಮಾರ’ಶ್ರೀ ಹೆಸರು ನಾಮಕರಣ -Vishwanews24

ತುಮಕೂರು: ನಡೆದಾಡುವ ದೇವರು ಎಂದೇ ಜನಾನುರಾಗಿಯಾಗಿದ್ದ ಲಿಂಗೈಕ್ಯ ಡಾ.ಶ್ರೀ,ಶ್ರೀ ಶಿವಕುಮಾರ ಮಹಾಸ್ವಾಮಿಗಳ 112ನೇ ಜಯಂತಿ ಹಿನ್ನೆಲೆಯಲ್ಲಿ ಸೋಮವಾರ ತುಮಕೂರು ಸಿದ್ದಗಂಗಾಕ್ಷೇತ್ರದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿಯವರು ಶಿವಕುಮಾರ ಸ್ವಾಮೀಜಿ ಅವರ ಗುರುಗಳಾದ ಉದ್ಧಾನಶ್ರೀಗಳ ಗದ್ದುಗೆಗೆ ನಂತರ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ನೆರವೇರಿಸಿದರು.

ಬೆಳಿಗ್ಗೆ ಸ್ವಾಮೀಜಿ ಪ್ರತಿಮೆ ಮೆರವಣಿಗೆ ನಡೆಸಲಾಯಿತು. ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

ಲಿ.|ಸಿದ್ದಗಂಗಾಶ್ರೀಗಳ 112ನೇ ಜಯಂತಿ ಹಿನ್ನೆಲೆಯಲ್ಲಿ ಮಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದುಬರುತ್ತಿದ್ದು, ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದಾರೆ.ಮಠದಲ್ಲಿ 112 ಶಿಶುಗಳಿಗೆ ಶಿವಕುಮಾರಶ್ರೀಗಳ ನಾಮಕರಣ ನಡೆಯಿತು.

ಗದ್ದುಗೆ ಮುಂಭಾಗ ವಿಭೂತಿ, ರುದ್ರಾಕ್ಷಿ ಹಾಗೂ ಧಾನ್ಯಗಳಿಂದ ಶ್ರೀಗಳ ಭಾವಚಿತ್ರ ಬಿಡಿಸಲಾಗಿತ್ತು. ಗದ್ದುಗೆಯನ್ನು ವಿವಿಧ ಪುಪ್ಪಗಳಿಂದ ಅಲಂಕರಿಸಲಾಗಿತ್ತು.

Vishwa News 24

Recent Posts

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

58 minutes ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

2 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

2 hours ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

2 hours ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

2 hours ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

2 hours ago