ತುಮಕೂರು: ನಡೆದಾಡುವ ದೇವರು ಎಂದೇ ಜನಾನುರಾಗಿಯಾಗಿದ್ದ ಲಿಂಗೈಕ್ಯ ಡಾ.ಶ್ರೀ,ಶ್ರೀ ಶಿವಕುಮಾರ ಮಹಾಸ್ವಾಮಿಗಳ 112ನೇ ಜಯಂತಿ ಹಿನ್ನೆಲೆಯಲ್ಲಿ ಸೋಮವಾರ ತುಮಕೂರು ಸಿದ್ದಗಂಗಾಕ್ಷೇತ್ರದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ಮಠದ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿಯವರು ಶಿವಕುಮಾರ ಸ್ವಾಮೀಜಿ ಅವರ ಗುರುಗಳಾದ ಉದ್ಧಾನಶ್ರೀಗಳ ಗದ್ದುಗೆಗೆ ನಂತರ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ನೆರವೇರಿಸಿದರು.
ಬೆಳಿಗ್ಗೆ ಸ್ವಾಮೀಜಿ ಪ್ರತಿಮೆ ಮೆರವಣಿಗೆ ನಡೆಸಲಾಯಿತು. ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.
ಲಿ.|ಸಿದ್ದಗಂಗಾಶ್ರೀಗಳ 112ನೇ ಜಯಂತಿ ಹಿನ್ನೆಲೆಯಲ್ಲಿ ಮಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡು ಹರಿದುಬರುತ್ತಿದ್ದು, ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದಾರೆ.ಮಠದಲ್ಲಿ 112 ಶಿಶುಗಳಿಗೆ ಶಿವಕುಮಾರಶ್ರೀಗಳ ನಾಮಕರಣ ನಡೆಯಿತು.
ಗದ್ದುಗೆ ಮುಂಭಾಗ ವಿಭೂತಿ, ರುದ್ರಾಕ್ಷಿ ಹಾಗೂ ಧಾನ್ಯಗಳಿಂದ ಶ್ರೀಗಳ ಭಾವಚಿತ್ರ ಬಿಡಿಸಲಾಗಿತ್ತು. ಗದ್ದುಗೆಯನ್ನು ವಿವಿಧ ಪುಪ್ಪಗಳಿಂದ ಅಲಂಕರಿಸಲಾಗಿತ್ತು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…