Featured

ಶಿವಧೂತೆ ಗುಳಿಗೆ ನಾಟಕದ ಬಗ್ಗೆ ಅರಗ ಜ್ಞಾನೇಂದ್ರ ವ್ಯಂಗ್ಯ ಹೇಳಿಕೆ  : ಸಾಮಾಜಿಕ ಜಾಲತಾಣದಲ್ಲಿ ವೈರಲ್ – Vishwanews24

ಶಿವಧೂತೆ ಗುಳಿಗೆ ನಾಟಕದ ಬಗ್ಗೆ ಅರಗ ಜ್ಞಾನೇಂದ್ರ ವ್ಯಂಗ್ಯ ಹೇಳಿಕೆ  : ಸಾಮಾಜಿಕ ಜಾಲತಾಣದಲ್ಲಿ ವೈರಲ್

ತೀರ್ಥಹಳ್ಳಿ : ಕರಾವಳಿಯ ಉಭಯ ಜಿಲ್ಲೆಗಳ ಆರಾಧ್ಯ ದೈವವಾದ ಗುಳಿಗ ದೈವದ ಆಧಾರಿತ “ಶಿವಧೂತೆ ಗುಳಿಗೆ” ನಾಟಕದ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನೀಡಿರುವ ವ್ಯಂಗ್ಯವಾದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತೀರ್ಥಹಳ್ಳಿಯ ಎಪಿಎಂಸಿ ಸಮೀಪ ನಡೆದ ರೈತ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಗೃಹಸಚಿವರು ಹತ್ತು ಹಲವು ವಿಚಾರಗಳನ್ನು ಪ್ರಸ್ತಾಪಿಸಿ “ಮಹಿಳೆಯರ ಕಿವಿ ಮೇಲೆ ಜಾಗವೇ ಇಲ್ಲ. ತೊಗೊಂಡು ಹೋಗಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ಕೊಟ್ಟಿದ್ದಾರೆ. ಇಲ್ಲಿ ನಾನು ನೋಡಿದೆ ನಿನ್ನೆಯಿಂದ ಎಂಥದೋ ಗುಳಿಗೆ, ಗುಳಿಗೆ ಅಂತ ಹಾಕಿದ್ದಾರೆ. ವಾಲ್‌ ಪೋಸ್ಟ್‌ನಲ್ಲಿ ನಿನ್ನೆ ರಾತ್ರಿ ಎಂಥದೋ ನಾಟಕ. ಬಹಳ ಅಪಾಯ. ಇವರು ಯಾವ ಗುಳಿಗೆ ಕೊಡ್ತಾರೆ ಅಂಥ ಗೊತ್ತಿಲ್ಲ. ಜಾಪಾಳ್‌ ಮಾತ್ರೆ ಗುಳಿಗೆ ಕೊಟ್ರು ಕೊಡಬಹುದು. ಏಕೆಂದರೆ ಇವರು ಹೊಸ ಹೊಸ ನಾಟಕಗಳನ್ನು ಶುರುಮಾಡಿದ್ದಾರೆ” ಎಂದು ಹೇಳಿ ದಕ್ಷಿಣ ಕನ್ನಡ ಜಿಲ್ಲೆಯಿಂದ ವಲಸಿಗರಾಗಿ ತೀರ್ಥಹಳ್ಳಿಯಲ್ಲಿ ನೆಲೆಸಿರುವವರನ್ನು ಪರೋಕ್ಷವಾಗಿ ಆರಗ ಜ್ಞಾನೇಂದ್ರ ನಿಂದಿಸಿದರೆ ಎಂಬ ಚರ್ಚೆ ಇದೀಗ ಆರಂಭವಾಗಿದೆ.

ಆರಗ ಜ್ಞಾನೇಂದ್ರರ ಬದ್ಧ ರಾಜಕೀಯ ವೈರಿ ಕಿಮ್ಮನೆ ರತ್ನಾಕರ್‌ ಸಾರಥ್ಯದಲ್ಲಿ ನಡೆದಿದ್ದು, ಶ್ರದ್ಧಾ ಭಕ್ತಿಯಿಂದ ಆದಾಧಿಸುವ ದೈವವನ್ನು ಗೃಹ ಸಚಿವರು ಗುಳಿಗೆ ಎಂದು ಅಸಹನೆ, ವ್ಯಂಗ್ಯದಿಂದ ಮಾತನಾಡಿರುವುದು ಇಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ತುಳು ನಾಟಕ ರಂಗದಲ್ಲಿ ಹೊಸ ಅಲೆ ಎಬ್ಬಿಸಿರುವ ವಿಜಯಕುಮಾರ್‌ ಕೋಡಿಯಾಲಬೈಲು ನಿರ್ದೇಶನದ “ಶಿವದೂತೆ ಗುಳಿಗೆ” ಎಂಬ ತುಳು ನಾಟಕ ಏಳೆಂಟು ಸಾವಿರ ಪ್ರೇಕ್ಷಕರೆದುರು ಪ್ರದರ್ಶನಗೊಂಡು ದಾಖಲೆ ಬರೆದಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago