ಮಂಡ್ಯ : ಎರಡು ದಿನಗಳ ಹಿಂದೆ ಮಳವಳ್ಳಿ ತಾಲೂಕಿನ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದ ಕಾಡಾನೆಯನ್ನು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ.
ಶಿವವಸಮುದ್ರ ಬಳಿಯ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ಆನೆ ಓಡಾಡುವುದನ್ನು ಅಲ್ಲಿನ ಅಧಿಕಾರಿಗಳು ಗಮನಿಸಿದ್ದರು. ಆದರೆ ಶನಿವಾರ ರಾತ್ರಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರಕ್ಕೆ ನೀರು ಪೂರೈಸುವ ಸುಮಾರು 20 ಅಡಿ ಆಳದ ಕೆನಲ್ ಗೇಟ್ ಮೂಲಕ ಕಾಡಾನೆ ನಾಲೆಗೆ ಇಳಿದಿದೆ. ಆದರೆ ನೀರಿನ ಹರಿವಿನ ರಭಸ ಹೆಚ್ಚಾಗಿದ್ದರಿಂದ ಮತ್ತೆ ಮರಳಿ ಬರಲು ಸಾಧ್ಯವಾಗಿರಲಿಲ್ಲ.
ಭಾನುವಾರ ಆನೆ ಕಾಣದಿರುವುದನ್ನು ಗಮನಿಸಿದ ಅಧಿಕಾರಿಗಳಿಗೆ ಆನೆ ನಾಲೆಗೆ ಇಳಿದಿರುವ ವಿಷಯ ಗೊತ್ತಾಗಿದೆ. ಬಳಿಕ ಸಂಜೆವರೆಗೆ ಆನೆ ಮೇಲೆ ಬರುತ್ತದೆ ಎಂದು ಕಾದು ನೋಡಿದರೂ ಕೂಡ ಆನೆ ಮೇಲೆ ಬಂದಿಲ್ಲ. ಹೀಗಾಗಿ ಡಿಸಿಎಫ್ ರಘು ಹಾಗೂ ವನ್ಯಜೀವಿ ವಲಯ ಮೈಸೂರು ವಿಭಾಗ ಡಿಸಿಎಫ್ ಪ್ರಭು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ನಾಲೆಯ ನೀರಿನ ಪ್ರಮಾಣವನ್ನು ತಗ್ಗಿಸಿ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಆರಂಭದಲ್ಲಿ ಅಧಿಕಾರಿಗಳು ಆನೆಗೆ ಆಹಾರ ನೀಡಿ, ಗನ್ನಲ್ಲಿ ಶೂಟ್ ಮಾಡುವ ಮೂಲಕ ಅರವಳಿಕೆ ಮದ್ದು ನೀಡಿದ್ದರು. ಆನೆ ಪ್ರಜ್ಞೆ ತಪ್ಪಿದ ಬಳಿಕ ಹೈಡ್ರಾಲಿಕ್ ಕ್ರೇನ್ ಮೂಲಕ ಹಗ್ಗವನ್ನು ಕಟ್ಟಿ ಕಂಟೇನರ್ ಮೇಲೆ ಇಟ್ಟು ಆನೆಯನ್ನು ಮೇಲಕ್ಕೆ ಎತ್ತಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…