ಬೆಂಗಳೂರು : ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗರೂಕತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ನೀಡಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಘಟನೆಯ ಹಿನ್ನೆಲೆಯಲ್ಲಿ ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡಿದ್ದೇವೆ. ಹೀಗಾಗಿ ಜನರು ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಘಟನೆಗೆ ಕಾರಣ ಏನು ಎಂಬುವುದನ್ನು ವಿವರಿಸಿದ ಪರಮೇಶ್ವರ್, ‘ಹಿಂದೆ ಇದೇ ಹುಡುಗರು ಗಲಾಟೆ ಮಾಡಿಕೊಂಡಿದ್ದರು. ಮತ್ತೆ ಯಾವ ಕಾರಣಕ್ಕೆ ಘರ್ಷಣೆ ಆಯ್ತು ಅಂತಾ ಗೊತ್ತಾಗಿಲ್ಲ, ಆದ್ರೆ ಹೊಡೆದಾಡಿಕೊಂಡಿದ್ದಾರೆ. ಕೈಯಿಂದ ಎದೆಭಾಗಕ್ಕೆ ಹೊಡೆದ ಪರಿಣಾಮ ಬಾಲಕ ಸಂಕೇತ್ ಮೃತಪಟ್ಟಿದ್ದಾನೆ ಎಂದು ವಿವರಿಸಿದರು.
ಇದನ್ನೂ ಓದಿ : 👇
ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗಡೆ ಈ ಘಟನೆ ನಡೆದಿದೆ. 16 ವರ್ಷದ ಬಾಲಕ ಸಂಕೇಶ್ ಕೊಲೆಯಾಗಿದೆ. ಸಂಕೇತ್ ಹಾಗೂ ಹುಡುಗರ ಗುಂಪು ನಡುವೆ ಜಗಳ ಆಗಿತ್ತು. ಈ ಸಂದರ್ಭದಲ್ಲಿ ಎದೆಯ ಭಾಗಕ್ಕೆ ಹೊಡೆದ ಪರಿಣಾಮ ಸಂಕೇತ್ ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಸಿನ ಬಾಲಕರ ಬಂಧನ ಆಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…