Featured

ಶಿವಮೊಗ್ಗ: ಕಾಲೇಜು ಮುಂದೆ ಅಮಲಿನಲ್ಲಿ ವಿದ್ಯಾರ್ಥಿಗಳ ತೂರಾಟ ; ವಿಡಿಯೋ ವೈರಲ್ – Vishwanews24

ಶಿವಮೊಗ್ಗ: ಕಾಲೇಜು ಮುಂದೆ ಅಮಲಿನಲ್ಲಿ ವಿದ್ಯಾರ್ಥಿಗಳ ತೂರಾಟ ; ವಿಡಿಯೋ ವೈರಲ್

ಶಿವಮೊಗ್ಗ: ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ.ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.

ವಿಡಿಯೋದಲ್ಲಿ ಏನಿದೆ?: ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್ ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ ಮಾಡಿದ್ದಾರೆ. ವಿದ್ಯಾರ್ಥಿಯೊಬ್ಬ ಮುಖ ಕೆಳಗೆ ಮಾಡಿ ಫುಟ್ ಪಾತ್ ಮೇಲೆ ಬಿದ್ದಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ತಲೆ ಬಗ್ಗಿಸಿ ಕುಳಿತಿರುತ್ತಾನೆ. ಅವರ ಸ್ನೇಹಿತರು ಇಬ್ಬರನ್ನು ಸಂತೈಸುತ್ತಾರೆ. ಈ ವೇಳೆ ತಲೆ ಕೆಳಗೆ ಹಾಕಿಕೊಂಡು ಕುಳಿತಿದ್ದ ವಿದ್ಯಾರ್ಥಿ ದಿಢೀರ್ ಎದ್ದು ಮುಂದಕ್ಕೆ ನಡೆಯುತ್ತಾನೆ. ಕೆಲವು ಹೆಜ್ಜೆ ಹಾಕುವಷ್ಟರಲ್ಲಿ ತೂರಾಡಿ ಕೆಳಗೆ ಬೀಳುತ್ತಾನೆ.

 ಜು.30ರಂದು ‘ಸಿಇಟಿ ಫಲಿತಾಂಶ’ ಪ್ರಕಟ –

ವೈರಲ್: ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತಾ ಓಡಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಪ್ ಗ್ರೂಪ್ ಗಳಲ್ಲಿಯು ವಿಡಿಯೋ ಶೇರ್ ಆಗುತ್ತಿದೆ.

ಮಾದಕ ವಸ್ತು?: ವಿಡಿಯೋ ಚಿತ್ರೀಕರಣಗೊಂಡ ದಿನ ಮತ್ತು ಸಮಯದ ಕುರಿತು ಸ್ಪಷ್ಟತೆ ಇಲ್ಲ. ಆದರೆ ವಿದ್ಯಾರ್ಥಿಗಳು ಆಗಷ್ಟೆ ಕಾಲೇಜಿನಿಂದ ಹೊರ ಬಂದಂತೆ ತೋರುತ್ತದೆ. ಈ ವಿದ್ಯಾರ್ಥಿಗಳು ಅಮಲಿಗೆ ಮದ್ಯ ಕಾರಣವೊ ಅಥವಾ ಮಾದಕ ವಸ್ತುಗಳು ಕಾರಣವೊ ಎಂಬುದು ತಿಳಿದು ಬಂದಿಲ್ಲ.

ಕಾಲೇಜು ಕ್ಯಾಂಪಸ್ ಗಳಲ್ಲಿ ಗಾಂಜಾ, ಡ್ರಗ್ಸ್ ಪೂರೈಕೆಯಾಗುತ್ತಿರುವ ಕುರಿತು ಜಿಲ್ಲೆಯಲ್ಲಿ ಆತಂಕವಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮತ್ತಷ್ಟು ಮಾದಕ ವಸ್ತುಗಳು ವಿದ್ಯಾರ್ಥಿಗಳ ಕೈ ಸೇರುತ್ತಿರುವ ಕುರಿತು ಗಂಭೀರ ಚರ್ಚೆ ಆರಂಭವಾಗಿದೆ. ಕಾಲೇಜು ಅಡಳಿತ ಮಂಡಳಿ ಮತ್ತು ಪೋಷಕರು ಜಾಗೃತಿ ಮೂಡಿಸುವತ್ತ ಹೆಜ್ಜೆ ಇರಿಸಬೇಕಿದೆ. ಪೊಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವ ಅಗತ್ಯವಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಘಟನೆಯ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ್ದು, ತನಿಖೆಯಲ್ಲಿ ವಿದ್ಯಾರ್ಥಿಗಳು ಸಾಗರ ರಸ್ತೆಯಲ್ಲಿರುವ ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿಕೊಂಡು ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಾಗ ಕಾಲೇಜಿನ ಗೇಟ್ ನಲ್ಲಿ ತಡೆಯಲಾಗಿತ್ತು. ಬಳಿಕ ಅವರ ಪೋಷಕರಿಗೆ ಈ ವಿಚಾರವನ್ನು ತಿಳಿಸಿ, ಕಾಲೇಜು ಆಡಳಿತ ಮಂಡಳಿಯು ಪೋಷಕರೊಂದಿಗೆ ವಿದ್ಯಾರ್ಥಿಗಳಿಗೆ ಈ ವಿಷಯವಾಗಿ ಸಮಾಲೋಚನೆ ನಡೆಸಿದೆ ಎಂದಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

6 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

6 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

6 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

6 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago