ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕೋಮು ಗಲಾಟೆ ನಡೆದಿರುವ ಶಿವಮೊಗ್ಗ ನಗರದ ಹೊರವಲಯದ ಶಾಂತಿನಗರದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಪೊಲೀಸರ ಬಿಗಿ ಭದ್ರತೆ ನಡುವೆ ಬೂದಿ ಮುಚ್ಚಿದ ಕೆಂಡದಂತಿದೆ.
ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಮಹಾತ್ಮ ಗಾಂಧಿ ಪಾರ್ಕ್ನಲ್ಲಿ ನಿನ್ನೆ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ನೇತೃತ್ವದಲ್ಲಿ ಸೌಹಾರ್ದ ಸಭೆ ನಡೆಯಿತು. ಶಾಂತಿಗಾಗಿ ನಡೆದ ಸೌಹಾರ್ದ ಸಭೆಯಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಸರ್ವ ಧರ್ಮಗಳ ಮುಖಂಡರು ಭಾಗಿಯಾಗಿದ್ದರು.
ಈ ವೇಳೆ ನಗರದಲ್ಲಿ ಶಾಂತಿ ನೆಲೆಸಲು ಗಾಂಧಿ ಪ್ರತಿಮೆ ಮುಂದೆ ಸೌಹಾರ್ದಕ್ಕಾಗಿ ಸಂಕಲ್ಪ ಕೈಗೊಳ್ಳಲಾಯಿತು. ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ಮೌಲಾನಿ ಅಬ್ದುಲ್ ಲತೀಫ್ ಮುಂತಾದ ಸರ್ವ ಧರ್ಮಗಳ ಮುಖಂಡರು ಭಾಗಿಯಾಗಿದ್ದರು.
ಸೌಹಾರ್ದ ಸಭೆಯ ಬಳಿಕ ಮಾತನಾಡಿದ ವಿನಯ್ ಗುರೂಜಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸರ ಮೇಲೆ ನಿನ್ನೆ ಭಾನುವಾರ ಕಲ್ಲು ತೂರಿದ್ದಾರೆ. ಮನೆ ಮಠ ಬಿಟ್ಟು, ಹಬ್ಬ ಬಿಟ್ಟು ಕೆಲಸ ಮಾಡುತ್ತಾರೆ. ರಜೆ ಹಾಕದೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸುತ್ತಾರೆ. ಜನ ಕಾನೂನು ವಿರುದ್ಧವೇ ಹೋಗುತ್ತಾರೆ ಅಂದ್ರೆ ಯಾವ ಮಟ್ಟಿಗೆ ಅವರು ಬಂಡೆದ್ದು ಹೋಗಿದ್ದಾರೆ ನೋಡಿ. ಕಾನೂನು ಕಾಯುವವರಿಗೆ ಬೆಲೆ ಇಲ್ಲ ಅಂದರೆ ಪ್ರಜಾಪ್ರಭುತ್ವ ಎಲ್ಲಿಗೆ ಹೋಗಿ ಮುಟ್ಟಿದೆ ಎಂದು ಆತಂಕ ವ್ತಕ್ತಪಡಿಸಿದರು.
ಕಾಲೇಜು ವಿದ್ಯಾರ್ಥಿಗಳ ಮೇಲೆ ಕಣ್ಣಿಡಬೇಕು. ತಂದೆ ತಾಯಿ ಮಕ್ಕಳ ಮೇಲೆ ಕಾಳಜಿ ವಹಿಸಬೇಕು. ಪ್ರತಿ ಧರ್ಮದವರೂ ಶಿವಮೊಗ್ಗದಲ್ಲಿ ಬಾಳುತ್ತಿದ್ದಾರೆ. ನನ್ನ ಆಶ್ರಮದಲ್ಲಿ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಅಂತ ಭೇದಭಾವ ಇಲ್ಲ. ಶಾಂತಿ ಹಾಳಾಗುತ್ತಿರುವ ಮೂಲ ಎಲ್ಲಿದೆ, ಇದರ ತಾಯಿ ಬೇರನ್ನು ಹುಡುಕಬೇಕು. ಶಿವಮೊಗ್ಗದ ಗಲಾಟೆಯಲ್ಲಿ 15 ರಿಂದ 20 ವರ್ಷದ ಯುವಕರು ಭಾಗಿಯಾಗುತ್ತಾರೆ. ಇದು ಆತಂಕಕಾರಿಯಾಗಿದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…