Featured

ಶಿವಮೊಗ್ಗ ಗಲಭೆಯಲ್ಲಿ ಯುವಕರು ಭಾಗಿಯಾಗಿರುವುದು ಆತಂಕಕಾರಿ: ವಿನಯ್ ಗುರೂಜಿ – Vishwanews24

ಶಿವಮೊಗ್ಗ ಗಲಭೆಯಲ್ಲಿ ಯುವಕರು ಭಾಗಿಯಾಗಿರುವುದು ಆತಂಕಕಾರಿ: ವಿನಯ್ ಗುರೂಜಿ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕೋಮು ಗಲಾಟೆ ನಡೆದಿರುವ ಶಿವಮೊಗ್ಗ ನಗರದ ಹೊರವಲಯದ ಶಾಂತಿನಗರದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಪೊಲೀಸರ ಬಿಗಿ ಭದ್ರತೆ ನಡುವೆ ಬೂದಿ ಮುಚ್ಚಿದ ಕೆಂಡದಂತಿದೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ನಿನ್ನೆ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ನೇತೃತ್ವದಲ್ಲಿ ಸೌಹಾರ್ದ ಸಭೆ ನಡೆಯಿತು. ಶಾಂತಿಗಾಗಿ ನಡೆದ ಸೌಹಾರ್ದ ಸಭೆಯಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಸರ್ವ ಧರ್ಮಗಳ ಮುಖಂಡರು ಭಾಗಿಯಾಗಿದ್ದರು.

ಈ ವೇಳೆ ನಗರದಲ್ಲಿ ಶಾಂತಿ ನೆಲೆಸಲು ಗಾಂಧಿ ಪ್ರತಿಮೆ ಮುಂದೆ ಸೌಹಾರ್ದಕ್ಕಾಗಿ ಸಂಕಲ್ಪ ಕೈಗೊಳ್ಳಲಾಯಿತು. ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ಮೌಲಾನಿ ಅಬ್ದುಲ್ ಲತೀಫ್ ಮುಂತಾದ ಸರ್ವ ಧರ್ಮಗಳ ಮುಖಂಡರು ಭಾಗಿಯಾಗಿದ್ದರು.

ಸೌಹಾರ್ದ ಸಭೆಯ ಬಳಿಕ ಮಾತನಾಡಿದ ವಿನಯ್ ಗುರೂಜಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸರ ಮೇಲೆ ನಿನ್ನೆ ಭಾನುವಾರ ಕಲ್ಲು ತೂರಿದ್ದಾರೆ. ಮನೆ ಮಠ ಬಿಟ್ಟು, ಹಬ್ಬ ಬಿಟ್ಟು ಕೆಲಸ ಮಾಡುತ್ತಾರೆ. ರಜೆ ಹಾಕದೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸುತ್ತಾರೆ. ಜನ ಕಾನೂನು ವಿರುದ್ಧವೇ ಹೋಗುತ್ತಾರೆ ಅಂದ್ರೆ ಯಾವ ಮಟ್ಟಿಗೆ ಅವರು ಬಂಡೆದ್ದು ಹೋಗಿದ್ದಾರೆ ನೋಡಿ. ಕಾನೂನು ಕಾಯುವವರಿಗೆ ಬೆಲೆ ಇಲ್ಲ ಅಂದರೆ ಪ್ರಜಾಪ್ರಭುತ್ವ ಎಲ್ಲಿಗೆ ಹೋಗಿ ಮುಟ್ಟಿದೆ ಎಂದು ಆತಂಕ ವ್ತಕ್ತಪಡಿಸಿದರು.

ಕಾಲೇಜು ವಿದ್ಯಾರ್ಥಿಗಳ ಮೇಲೆ ಕಣ್ಣಿಡಬೇಕು. ತಂದೆ ತಾಯಿ ಮಕ್ಕಳ ಮೇಲೆ ಕಾಳಜಿ ವಹಿಸಬೇಕು. ಪ್ರತಿ ಧರ್ಮದವರೂ ಶಿವಮೊಗ್ಗದಲ್ಲಿ ಬಾಳುತ್ತಿದ್ದಾರೆ. ನನ್ನ ಆಶ್ರಮದಲ್ಲಿ ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಅಂತ ಭೇದಭಾವ ಇಲ್ಲ. ಶಾಂತಿ ಹಾಳಾಗುತ್ತಿರುವ ಮೂಲ ಎಲ್ಲಿದೆ, ಇದರ ತಾಯಿ ಬೇರನ್ನು ಹುಡುಕಬೇಕು. ಶಿವಮೊಗ್ಗದ ಗಲಾಟೆಯಲ್ಲಿ 15 ರಿಂದ 20 ವರ್ಷದ ಯುವಕರು ಭಾಗಿಯಾಗುತ್ತಾರೆ. ಇದು ಆತಂಕಕಾರಿಯಾಗಿದೆ ಎಂದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

41 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago