ಶಿವಮೊಗ್ಗ ಗಲಭೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಬಂಧನ, ಕಾನೂನು ಕ್ರಮ : ಆರಗ ಜ್ಞಾನೇಂದ್ರ ಎಚ್ಚರಿಕೆ – Vishwanews24

Featured, ರಾಜ್ಯ ನ್ಯೂಸ್

ಶಿವಮೊಗ್ಗ ಗಲಭೆ ಪ್ರಕರಣ : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಬಂಧನ, ಕಾನೂನು ಕ್ರಮ : ಆರಗ ಜ್ಞಾನೇಂದ್ರ ಎಚ್ಚರಿಕೆ – Vishwanews24

ಬೆಂಗಳೂರು: ಶಿವಮೊಗ್ಗ ಗಲಭೆ ಪ್ರಕರಣದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರನ್ನು ಬಂಧನ ಮಾಡುತ್ತೇವೆ. ಅಷ್ಟೇ ಅಲ್ಲ ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಘಟನೆ ಆದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು ಇಟ್ಟಿದ್ದೇವೆ. ಏನೇನೋ ಪೋಸ್ಟ್ ಹಾಕುವ ಹಾಗೆ ಇಲ್ಲ. ಪ್ರಚೋದನಕಾರಿ ಪೋಸ್ಟ್ ಮಾಡಿದರೆ ಅವರನ್ನು ಬಂಧನ ಮಾಡಲು ಸೂಚನೆ ನೀಡಲಾಗಿದೆ. ಅಲ್ಲದೆ ಕಾನೂನು ಕ್ರಮಕ್ಕೂ ನಿರ್ದೇಶನ ನೀಡಿದ್ದೇನೆ ಎಂದ ಅವರು, ಇದನ್ನು ಪೊಲೀಸ್ ಠಾಣೆಗಳಲ್ಲಿ ರಿವ್ಯೂ ಮಾಡಲು ತಂಡಗಳನ್ನು ರಚನೆ ಮಾಡಲಾಗಿದೆ ಎಂದರು.

ಸಾಮಾಜಿಕ ಜಾಲತಾಣಗಳು ಒಳ್ಳೆಯ ವಾತಾವರಣ ಸೃಷ್ಟಿ ಮಾಡಲು ಬಳಸಬೇಕು ಎಂದು ಕಿವಿ ಮಾತು ಹೇಳಿದರು.

ಉಕ್ರೇನ್ ಮೇಲೆ ರಷ್ಯಾ ದಾಳಿ ಬೆನ್ನಲ್ಲೇ ಗಗನಕ್ಕೇರಿದ ತೈಲ ಬೆಲೆ: ಪ್ರತೀ ಬ್ಯಾರೆಲ್ ಗೆ 100 ಡಾಲರ್ – Vishwanews24

Leave a Reply